ದಾವಣಗೆರೆ: ಗುಂಪು ಘರ್ಷಣೆ,‌ ಪೊಲೀಸ್ ಮೇಲೆ ಹಲ್ಲೆ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಗುಂಪು ಘರ್ಷಣೆ,‌ ಪೊಲೀಸ್ ಮೇಲೆ ಹಲ್ಲೆ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಬಂಧನದಾವಣಗೆರೆ: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಯುವಕರ ನಡುವೆ ಗುಂಪು ಘರ್ಷಣೆ ಹಿನ್ನೆಲೆ ಬಂಧೀಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದರ್ಪ ತೋಪಿದ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತನ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ದಾವಣಗೆರೆ: ಚಿನ್ನಾಭರಣ ಕಳವು ಪ್ರಕರಣದಲ್ಲಿ 31 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರ ಹಸನ್ ಬಂಧಿತ ಆರೋಪಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಆಪ್ತರೂ ಆಗಿರುವ ಅಯೂಬ್ ಪೈಲ್ವಾನ್ ಮನೆಯಲ್ಲಿ ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪುಡಿ ರೌಡಿ ರೀತಿ ವರ್ತನೆ ತೋರುದ್ದನು. ಕೊನೆಗೆ ಹಸನ್​​ನನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವಿಗೆ ಕಾರಣವಾಗಿದ್ದ ಚಾಲಕ 32 ವರ್ಷ ನಂತರ‌‌ ಬಂಧನ

ಘಟನೆ ಹಿನ್ನೆಲೆ‌ ಏನು..?

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಎದುರು ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ‌‌ ಸಮುದಾಯದ‌ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿತ್ತು. ಈ ಗಲಾಟೆಯಲ್ಲಿ 6 ಜನರಿಗೆ ಗಾಯವಾಗಿದ್ದವು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರು. ಯುವಕರ ಮೇಲೆ ದಾಳಿ ಮಾಡಿರೋದು ಅಯೂಬ್ ಪೈಲ್ವಾನ್ ಪುತ್ರರು ಎಂಬುದು‌ ಗೊತ್ತಾಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು

ಬಡಾವಣೆ ಠಾಣೆ ಇನ್ಸ್​​ಪೆಕ್ಟರ್​​ ಗಾಯತ್ರಿ, ಕಾನ್ಸ್​ಟೇಬಲ್​​ಗಳಾದ ಕೆಂಚಪ್ಪ ಮತ್ತು ಹರೀಶ್ ಸೇರಿ ತಂಡ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಆರೋಪಿ ಹಸನ್, ಪೊಲೀಸರ ಮೇಲೆಯೇ ದಾಳಿ ನಡೆಸಿದ ಆರೋಪ ಕೇಳಿಬಂಧಿದೆ. ಘಟನೆಯಲ್ಲಿ ಗಾಯಗೊಂಡಿರೋ ಪೊಲೀಸ್​​ ಸಿಬ್ಬಂದಿ ಕೆಂಚಪ್ಪ ಮತ್ತು ಹರೀಶ್​​ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಈ ಗಲಾಟೆ ವಿಚಾರವಾಗಿ ಹಳೇ ದಾವಣಗೆರೆಯಲ್ಲಿ ಬಿಗುವಿನ ವಾತಾರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ದಾವಣಗೆರೆಯಲ್ಲಿ ಅಪರಾಧ ಕೃತ್ಯದಲ್ಪಿ ಮೇಲಿಂದ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತರ ಹೆಸರು ಕೇಳಿಬರುತ್ತಿದೆ. ಡ್ರಗ್ಸ್ ಕೇಸ್​​ನಲ್ಲಿ ಶಾಮನೂರು ವೇದಮೂರ್ತಿ, ಅನ್ವರ್ ಪಾಷಾ ಜೈಲು ಸೇರಿದ್ದಾರೆ. ಅಕ್ಕಿ ಸಾಗಾಣಿಕೆಯಲ್ಲಿ ಸಚಿವ ಜಮೀರ್ ಎಂಬಾತ ಸಿಕ್ಕಿ ಬಿದ್ದಿದ್ದಾನೆ. ಇದೀಗ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಆಸ್ಪತ್ರೆ ಆವರಣದಲ್ಲಿ ಯುವಕರ‌ ಮೇಲೆ ಹಲ್ಲೆ ನಡೆಸಿ ಬಂಧಿಸಲು‌ ಬಂದ ಪೊಲೀಸರ ಮೇಲೂ ಸಹ ಹಲ್ಲೆಯ ಆರೋಪ ಕೇಳಿಬಂದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *