Connect with us

Dvgsuddi Kannada | online news portal | Kannada news online

ರಾಜಕೀಯಕ್ಕೆ ಅಧಿಕೃತ  ಎಂಟ್ರಿ ಕೊಟ್ಟ ಸೂಪರ್ ಸ್ಟಾರ್ ರಜನಿಕಾಂತ್; ಯುವಕರಿಗೆ ಮೊದಲ ಆದ್ಯತೆ ಎಂದ ತಲೈವಾ

ಪ್ರಮುಖ ಸುದ್ದಿ

ರಾಜಕೀಯಕ್ಕೆ ಅಧಿಕೃತ  ಎಂಟ್ರಿ ಕೊಟ್ಟ ಸೂಪರ್ ಸ್ಟಾರ್ ರಜನಿಕಾಂತ್; ಯುವಕರಿಗೆ ಮೊದಲ ಆದ್ಯತೆ ಎಂದ ತಲೈವಾ

ಚೆನ್ನೈ: ತಮಿಳುನಾಡು ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದು, ಇಂದು ಚೆನ್ನೈನಲ್ಲಿ ಕಾರ್ಯಕರ್ತರ ಜೊತೆ ಸಂವಾದ ನಡೆಸಿ ಪ್ರಾಮಾಣಿಕ, ಯುವ ಸಮುದಾಯ ಒಳಗೊಂಡ  ಸುಜನಶೀಲ ಪಕ್ಷ ಅಗತ್ಯವಾಗಿದೆ ಎಂದರು.

ತಮಿಳುನಾಡಿನ ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ನನಗೆ ಮುಖ್ಯಮಂತ್ರಿಯಾಗುವ ಆಸೆ ಇಲ್ಲ.  ಬದಲಾವಣೆ ಆಗುವುದನ್ನಷ್ಟೇ ನಾನು ಬಯಸುತ್ತೇನೆ.  ಬಿಸಿನೆಸ್ ಆಗಿರೋ ಪ್ರಸ್ತುತ ರಾಜಕೀಯ ಬದಲಾಗಬೇಕಿದೆ. ಏಕ ನಾಯಕ ರಾಜಕೀಯ ಬದಲಾಗಬೇಕು ಎಂದರು.

ಪಕ್ಷದ ಅಧ್ಯಕ್ಷರು ಸರ್ಕಾರದಲ್ಲಿ ಮೂಗು ತೂರಿಸಬಾರದು. ಹೊಸ ಪಕ್ಷ ಕಟ್ಟಿ ಹೊಸಬರು, ಯುವಕರಿಗೆ ಪಕ್ಷದಲ್ಲಿ ಆದ್ಯತೆ ಕೊಡುತ್ತೇನೆ. ನಿಷ್ಠಾವಂತರಿಗೆ ಪಕ್ಷದಲ್ಲಿ ಆದ್ಯತೆ ನೀಡಲಾಗುತ್ತೆ. ಪ್ರಾಮಾಣಿಕ ವ್ಯಕ್ತಿಗಳಿಗೆ ಟಿಕೆಟ್ ಕೊಡುತ್ತೇನೆ ಎಂದು ರಜನಿಕಾಂತ್ ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ಸುಶಿಕ್ಷಿತ ಮತ್ತು ಸಹಾನುಭೂತಿಯುಳ್ಳ ಯುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕನಸ ಹೊಂದಿದ್ದೇನೆ ಎಂದರು. ಇತ್ತೀಚೆಗೆ  ರಜನಿ ಮಕ್ಕಳ್ ಮಂದ್ರಮ್ (ಆರ್‌ಎಂಎಂ) ಪದಾಧಿಕಾರಿಗಳ ಜತೆ  ಮಾತುಕತೆ ನಡೆಸಿದ್ದ ರಜನೀಕಾಂತ್, ಮಹತ್ವದ ನಿರ್ಧಾರ ತಿಳಿಸವುದಾಗಿ ಹೇಳಿದ್ದರು.2021ರ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದ್ದು, ಪಕ್ಷಕ್ಕೆ ಚಾಲನೆ ನೀಡುವುದಾಗಿ ತಿಳಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top