ದಾವಣಗೆರೆ: ಮಧ್ಯ ಕರ್ನಾಟಕದ ದಾವಣಗೆರೆ ಈಗ “ರಿಪಬ್ಲಿಕ್ ಆಫ್ ದಾವಣಗೆರೆ” ಆಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯ ಘಟಕ ತನ್ನ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಆಪ್ತರ ʻಕೈʼಚಳಕ ನೋಡಿ:
▪️ ಶಾಮನೂರು ವೇದಮೂರ್ತಿ: ಡ್ರಗ್ಸ್ ದಂಧೆಯಲ್ಲಿ ಭಾಗಿ
▪️ ಮೊಹಮ್ಮದ್ ಜಮೀರ್: ಬಡವರ ಅನ್ನಭಾಗ್ಯ ಅಕ್ಕಿ ಕಳ್ಳತನ
▪️ ಹುಸೇನ್ & ಹಸೀನ್ : ಪೊಲೀಸರ ಮೇಲೆಯೇ ಹಲ್ಲೆ, ಗೂಂಡಾಗಿರಿ
ಖಾಕಿ ಪಡೆಗೇ ರಕ್ಷಣೆಯಿಲ್ಲದ ಮೇಲೆ ಜನಸಾಮಾನ್ಯರ ಪಾಡೇನು? ಈ ಗೂಂಡಾ ಸಂಸ್ಕೃತಿಗೆ ಕಡಿವಾಣ ಯಾವಾಗ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರೇ? ಪೋಸ್ಟ್ ಮಾಡಿದೆ.

ಕಳೆದ ಒಂದು ತಿಂಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಡ್ರಗ್ಸ್ ಕೇಸ್ ನಲ್ಲಿ 11ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಶಾಮನೂರು ವೇದಮೂರ್ತಿ ಪ್ರಮುಖನಾಗಿದ್ದು, ಜಿಲ್ಲಾ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದನು.ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿರುವ ಮೊಹಮ್ಮದ್ ಜಮೀರ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ. ಇನ್ನು ಪೊಲೀಸ್ ಮೇಲೆ ಹಲ್ಲೆ ನಡೆಸಿ ಬಂಧಿತರಾಗಿರುವ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಧೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರ. ಹೀಗಾಗಿ ರಾಜ್ಯ ಬಿಜೆಪಿ ಘಟಕ ದಾವಣಗೆರೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪ್ರಶ್ನಿಸಿದೆ.



