ಬೆಂಗಳೂರು: ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸಲು ರಾಜ್ಯ ಚುನಾವಣೆ ಆಯೋಗ ತಯಾರಿ ನಡೆಸಿದೆ . ಇದರ ಬೆನ್ನಲ್ಲೇ ರಾಜ್ಯದಲ್ಲಿ ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಐತಿಹಾಸಿಕ ಮೈಲಾರಲಿಂಗೇಶ್ವರ ಕಾರಣಿಕ; ಸಂಪಾದಿತಲೇ ಪರಾಕ್ ಎಂದು ಭವಿಷ್ಯವಾಣಿ ನುಡಿದ ಗೊರವಯ್ಯ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್ . ಕೆ. ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಕೇವಲ ಗ್ರಾಮ ಪಂಚಾಯಿತಿ ಚುನಾವಣೆ ಮಾತ್ರವಲ್ಲದೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನೂ ಕೂಡ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಸುಳ್ಳು ಸುದ್ದಿಗೆ ಕಡಿವಾಣ ಹಾಕಲು ಮತ್ತು ನಕಲಿ ಸಂದೇಶಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಡಿಜಿಟಲ್ ಕಂಟೆಂಟ್ ಮೂಲಕ ಕಡಿವಾಣಕ್ಕೆ ತೀರ್ಮಾನಿಸಿದೆ. ಎಐ ತಂತ್ರಜ್ಞಾನದ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಮಹತ್ವದ ಹೆಜ್ಜೆ ಇರಿಸಿದೆ. ಸುಳ್ಳು ಸುದ್ದಿ ಹರಡಿದರೆ ತಕ್ಷಣ ಅಲರ್ಟ್ ಆಗುತ್ತದೆ, ಅದು ಸರ್ಕಾರದ ಗಮನಕ್ಕೆ ಬರುತ್ತದೆ. ಈ ಮೂಲಕ ಸೋಶಿಯಲ್ ಮೀಡಿಯಾ ಮೇಲೆ ಕಣ್ಣಿಡಲು ಸರ್ಕಾರ ನಿರ್ಧರಿಸಿದೆ.



