ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 35 ಸಾವಿರ ರೂ ದಂಡ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ ಆದೇಶಿಸಿದೆ.
ದಾವಣಗೆರೆ ‘ಯಜಮಾನ್’ ಇನ್ನಿಲ್ಲ; ಯಜಮಾನ್ ಮೋತಿ ವೀರಣ್ಣ ನಿಧನಕ್ಕೆ ಕಂಬನಿ
16 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಸಿನ ಮಗಳು ತನ್ನ ತಾಯಿಯೊಂದಿಗೆ ತನ್ನ ಅಜ್ಜಿಯ ಊರಿಗೆ ಹೋಗಿದ್ದು ಸ್ವಲ್ಪದಿನ ಅಲ್ಲಿಯೇ ಇದ್ದರು. ಮಗಳು ಮನೆಯ ಹೊರಗಡೆ ಬಟ್ಟೆ ಒಣಹಾಕಿತ್ತಿದ್ದವಳು ಮನೆಯೊಳಗೆ ಬಾರದೆ ಇದ್ದಾಗ ನನ್ನ ಮಗಳ ಸ್ನೇಹಿತರ, ಸಂಬಂಧಿಕರ ಮನೆಗಳಲ್ಲಿ ವಿಚಾರ ಮಾಡಿದ್ದಾಗ ಪತ್ತೆಯಾಗಿರುವುದಿಲ್ಲ.
ಸೋಮವಾರ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಆಗಮನ
ಸಿದ್ದಪ್ಪ ಎಂಬುವವರು ನನ್ನ ಮಗಳನ್ನು ಕರೆದುಕೊಂಡು ಹೋಗಿರುವ ಬಗ್ಗೆ ಅನುಮಾನ ಇರುತ್ತದೆ ನನ್ನ ಮಗಳನ್ನು ಪತ್ತೆಮಾಡಿ ಕೊಡಿ ಎಂತಾ ನೀಡಿದ ದೂರಿನ ಮೇರೆಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ತಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಇನ್ ಸ್ಪೆಕ್ಟರ್ ಲಿಂಗನಗೌಡ ನೆಗಳೂರ್ ತನಿಖೆ ಕೈಗೊಂಡಿದ್ದು, ಸದರಿ ಪ್ರಕರಣದಲ್ಲಿ ಸಂಸ್ರಸ್ತೆ 15 ವರ್ಷ 4 ತಿಂಗಳ ಅಪ್ರಾಪ್ತ ವಯಸ್ಸಿನ ಮಗಳು ಮತ್ತು ಆರೋಪಿ ಸಿದ್ದಪ್ಪ ಪ್ರೀತಿ ಮಾಡುತ್ತಿರುವ ವಿಚಾರ ಗೊತ್ತಾಗಿ ಪಿಹೆಂಡತಿಯೊಂದಿಗೆ ತಮ್ಮ ಮಗಳನ್ನು ತನ್ನ ಹೆಂಡತಿಯ ತವರೂರಿಗೆ ಕಳುಹಿಸಿಕೊಟ್ಟಿದ್ದನು.
ಆರೋಪಿಯು ಅಪ್ರಾಪ್ತ ವಯಸ್ಸಿನ ಮಗಳನ್ನು ಪುಸಲಾಯಿಸಿ ದಿನಾಂಕ :26/02/2022 ರಂದು ಬಾಲಕಿಯನ್ನು ಅವರ ಅಜ್ಜಿಯ ಊರಿನಿಂದ ಭರಮಸಾಗರಕ್ಕೆ ಕರೆಯಿಸಿಕೊಂಡು ಇಲ್ಲಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿಂದ ಬೇರೆ ಬೇರೆ ಊರಿಗೆ ಕರೆದುಕೊಂಡು ಹೋಗಿದ್ದನು. ಆರೋಪಿಯು ಬಾಲಕಿಯು ಅಪ್ರಾಪ್ತ ವಯಸ್ಸಿನವಳೆಂದು ಗೊತ್ತಿದ್ದರು ಸಹ ಬಾಲಕಿಗೆ ನಾನು ನಿನ್ನನ್ನು ಮದುವೆಯಾಗುವುದಾಗಿ ಹೇಳಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಹಲವು ಬಾರಿ ಅತ್ಯಾಚಾರ ವೆಸಗಿರುವುದು ತನಿಖೆಯಿಂದ ಹಾಗೂ ಸಂಗ್ರಹಿಸಿದ ದಾಖಲೆಗಳಿಂದ, ಸಾಕ್ಷಿದಾರರ ಹೇಳಿಕೆಗಳಿಂದ ದೃಢಪಟ್ಟ ಮೇರೆಗೆ ಆರೋಪಿ ಸಿದ್ದಪ್ಪ ಮೇಲೆ ಬಸವರಾಜ್ ಹೋಗಿ ಅವರು ಪೋಕೋ ದೋಷರೋಪಣಾ ಪಟ್ಟಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.
ಈ ಸಂಬಂಧ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ ದಾವಣಗೆರೆಯಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು, ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿನಾಂಕ:30-01-2026 ರಂದು ಆರೋಪಿ ಸಿದ್ದಪ್ಪ (27) ಈತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35,000/- ರೂ ದಂಡ ವಿಧಿಸಿರುತ್ತಾರೆ.
ಸದರಿ ಆರೋಪಿತನು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದುದ್ದರಿಂದ ಸದರಿ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಲಾಗಿರುತ್ತದೆ. ಸದರಿ ಆರೋಪಿತರಿಂದ ವಸೂಲುಮಾಡಿದ ದಂಡದ ಒಟ್ಟು ಮೊತ್ತ 35,000/- ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿರುತ್ತದೆ. ಸದರಿ ಪ್ರಕರಣದಲ್ಲಿ ಸಂತ್ರಸ್ತೆ ಪರವಾಗಿ ಸರ್ಕಾರಿ ವಕೀಲರಾದ ಬಸವರಾಜ್ ಎ. ಎಂ ನ್ಯಾಯ ಮಂಡನೆ ಮಾಡಿದ್ದರು.



