ದಾವಣಗೆರೆ : ದಾವಣಗೆರೆ ತಾಲ್ಲೂಕು ವ್ಯಾಪ್ತಿಯ ಸೈನಿಕರು, ಮಾಜಿ ಸೈನಿಕರು ಸೈನಿಕರ ಕೋಟಾದಡಿ ಸರ್ಕಾರಿ ಜಮೀನು, ನಿವೇಶನ ಕೋರಿ ಫೆ. 16 ವರೆಗೆ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ಥ್ ತಿಳಿಸಿದ್ದಾರೆ.
ಶುಲ್ಕ ಮರು ಪಾವತಿ
ಹಿಂದುಳಿದ ವರ್ಗಗಳ ವಿದ್ಯಾರ್ಥಿ ಗಳು ಹಾಗೂ ಪ್ರವರ್ಗ-1ರ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ, ಶುಲ್ಕ ಮರು ಪಾವತಿ ಯೋಜನೆಗಳ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.15 ರವರೆಗೆ ವಿಸ್ತರಿಸಲಾಗಿದೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಭರ್ಜರಿ ಏರಿಕೆ; ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ; ಸಿಎಂ ಬದಲಾವಣೆ ಪ್ರಶ್ನೆ ಸಿಡಿಮಿಡಿಗೊಂಡ ಸಿಎಂ ಸಿದ್ದರಾಮಯ್ಯ
ಅರ್ಜಿಯನ್ನು ಫೆಬ್ರವರಿ 20 ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂ.ಸಂ:0836-2461666 ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಕಚೇರಿಯಿಂದ ಪಡೆಯಬೇಕು. ವಿವರಕ್ಕೆ ಸಂಪರ್ಕಿಸಿ. 8050392209, 7204396275.



