ದಾವಣಗೆರೆ: ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಬಂದ ಹಿನ್ನೆಲೆ ಬೆಸ್ಕಾಂ ಸಿವಿಲ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಚ್.ಅರ್ಜುನ್ ಅವರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು (ಫೆ.12) ದಾಳಿ ನಡೆಸಿದ್ದಾರೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಭರ್ಜರಿ ಏರಿಕೆ; ಕ್ವಿಂಟಾಲ್ ದರ 58 ಸಾವಿರ
ಅರ್ಜುನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಸಿದ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಹೀಗಾಗಿ ಮನೆ, ಕಚೇರಿ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದೇವೆ
-ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ
ನಾಲ್ಕು ಕಡೆ ಏಕಕಾಲಕ್ಕೆ ದಾಳಿ
ದಾವಣಗೆರೆ ಮತ್ತು ಶಿವಮೊಗ್ಗದ ಲೋಕಾಯುಕ್ತ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದೆ. ಎಂಜಿನಿಯರ್ ಅರ್ಜುನ್ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ದಾಕಲೆ ಪರಿಶೀಲನೆ ನಡೆಸಲಾಗಿದೆ.
ಎಲ್ಲಿಲ್ಲಿ ದಾಳಿ..?
ದಾವಣಗೆರೆಯ ಬೆಸ್ಕಾಂ ಕಚೇರಿ ಹಾಗೂ ನಿಟುವಳ್ಳಿ ಬಡಾವಣೆಯಲ್ಲಿರುವ ವಾಸದ ಮನೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ವಾಣಿಜ್ಯ ಸಂಕೀರ್ಣ. ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ತಳಲೆ ಗ್ರಾಮದ ಬಳಿ ಇರುವ ತೋಟದ ಮನೆಗಳ ಮೇಲೆ ದಾಳಿ ನಡೆದಿದೆ.
ಏನೆಲ್ಲಾ ವಶಕ್ಕೆ ಪಡೆಯಲಾಗಿದೆ..?
ಅರ್ಜುನ್ ಅವರು ತಮ್ಮ ಅಧಿಕೃತ ಆದಾಯದ ಮೂಲಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಸ್ಥಿರ ಮತ್ತು ಚರಾಸ್ತಿ ಹೊಂದಿದ್ದಾರೆ ಎಂಬ ಖಚಿತ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದಾಳಿಯ ವೇಳೆ ಆಸ್ತಿ , ಬ್ಯಾಂಕ್ ಖಾತೆಗಳು ಹಾಗೂ ಚಿನ್ನಾಭರಣಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.



