ಶಿವಮೊಗ್ಗ: ಇನ್ಮಂದೆ ಪಹಣಿಯೊಂದಿಗೆ ಸ್ಕೆಚ್, ಆಕಾರ್ ಬಂದ್ ಮತ್ತು ಮ್ಯುಟೇಷನ್ ಸೇರಿದಂತೆ ಸಮಗ್ರ ದಾಖಲೆಗಳು ಜನರಿಗೆ ಒಂದೇ ಶುಲ್ಕಕ್ಕೆ ನೀಡುವ ಭೂ ಆಧಾರ್ ಯೋಜನೆಗೆ ಶೀಘ್ರವೇ ನೀಲಿನಕ್ಷೆ ರಚಿಲಾಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಭರ್ಜರಿ ಏರಿಕೆ; ಕ್ವಿಂಟಾಲ್ ದರ 58 ಸಾವಿರ
ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ನನ್ನ ಭೂಮಿ ಹೆಸರಿನಲ್ಲಿ ದರಕಾಸ್ತು ಜಮೀನುಗಳ ಪೋಡಿ ಅಭಿಯಾನ ಶುರು ಮಾಡಿದ್ದು, ಹಿಂದೆ ಸರ್ಕಾರದಿಂದ ರೈತರಿಗೆ ಮಂಜೂರಾಗಿರುವ ಭೂಮಿಗೆ ಪಕ್ಕಾ ದಾಖಲೆ ಇಲ್ಲದೇ, ಮಾರಾಟ ಮಾಡಲು, ಭಾಗ ಮಾಡಲು, ಬ್ಯಾಂಕ್ ಸೌಲಭ್ಯ ಪಡೆಯಲು ಆಗದೇ ಅತಂತ್ರ ಸ್ಥಿತಿಯಲ್ಲಿರುವ ರೈತರಿಗೆ ಸರ್ಕಾರವೇ ಜಮೀನಿಗೆ ಹೋಗಿ ದರಕಾಸ್ತು ಪೋಡಿ ಮಾಡಿಸುವ ಅಭಿಯಾನವನ್ನು ಕೈಗೊಂಡಿದೆ.
ಈ ಯೋಜನೆಯಡಿ ವೇಗವಾಗಿ ಕೆಲಸ ಆಗುತ್ತಿದೆ. ಹಿಂದಿನ ಐದು ವರ್ಷದಲ್ಲಿ 8542 ಪೋಡಿಯಾಗಿದ್ದರೆ 2025 ರ ಜನವರಿಯಿಂದ 2026 ರ ಜನವರಿಯೊಳಗೆ 1.93 ಲಕ್ಷ ಪೋಡಿ ಮಾಡುವ ಮೂಲಕ ರೈತರ ಭೂಮಿ ಮಾಲೀಕತ್ವಕ್ಕೆ ಖಚಿತತೆ ನೀಡಲಾಗಿದೆ.
750 ಎಡಿಎಲ್ಆರ್ ನೇಮಕ
750 ಎಡಿಎಲ್ಆರ್ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದ್ದು ಕೆಲ ತಾಂತ್ರಿಕ ಕಾರಣದಿಂದ ಬಾಕಿ ಇದೆ. ಇದು ಸರಿಹೋದ ಮೇಲೆ ನೇಮಕ ಪ್ರಕ್ರಿಯೆ ಆರಂಭವಾಗುತ್ತದೆ.
5000 ರೋವರ್ ಖರೀದಿ
ಇಲಾಖೆಯಲ್ಲಿ ಸಾಕಷ್ಟು ಟೆಕ್ನಾಲಜಿ ಬಳಕೆ ಮಾಡಲಾಗುತ್ತಿದ್ದು ಸರ್ವೇ ಕಾರ್ಯಕ್ಕೆ ರೋವರ್ಸ್ ನೀಡಲಾಗಿದೆ. ಮತ್ತೆ 600 ರೋವರ್ಗಳಿಗೆ ಕಾರ್ಯಾದೇಶ ನೀಡಲಾಗಿದೆ. ಒಟ್ಟು 5000 ರೋವರ್ ಖರೀದಿಗೆ ಸರ್ಕಾರ ಮಂಜೂರಾತಿ ನೀಡಿದ್ದು ಪೂರೈಕೆದಾರರು ಲಭ್ಯವಾದ ನಂತರ ಖರೀದಿಸಲಾಗುವುದು ಎಂದರು.



