ಆಹಾರ ವಾಹಿನಿ ಯೋಜನೆಯಡಿ 3 ಲಕ್ಷ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆ; ವಾಲೆಂಟೈನ್ಸ್ ಡೇ ಹೆಸರಲ್ಲಿ ಫ್ರೀ ಚಾಕೊಲೇಟ್ ಗಿಫ್ಟ್ ಸೈಬರ್ ವಂಚನೆ ; ಎಚ್ಚರ ವಹಿಸಲು ಸೂಚನೆ

ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳಿಗೆ ಅನ್ವಯವಾಗುವುದಿಲ್ಲ.

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಭರ್ಜರಿ ಏರಿಕೆ; ಕ್ವಿಂಟಾಲ್ ದರ 58 ಸಾವಿರ

ಯಾವ ದಾಖಲೆ ಅಗತ್ಯ..?

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬ ವಾರ್ಷಿಕ ವರಮಾನ 3 ಲಕ್ಷ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.

ಎಲ್ಲಿ ಅರ್ಜಿ ಸಲ್ಲಿಸಬಹುದು.‌?

ಆಸಕ್ತ ಕಾಡುಗೊಲ್ಲ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಪರ್ಕಿಸಿ .

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *