ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು (ಫೆ.16) ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ: ಶ್ರೀ ದುರ್ಗಾಂಬಿಕಾದೇವಿ ಜಾತ್ರಾ ಮಹೋತ್ಸವ; ಡಬ್ಬಿ ಗಡಿಗಿ ಎಣಿಕೆ-11.80 ಲಕ್ಷ ಸಂಗ್ರಹ
ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ದುಗ್ಗಮ್ಮ ದೇವಾಸ್ಥಾನ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು.
ದಾವಣಗೆರೆ: ಹೂಡಿಕೆ ಮಾಡಿದ್ರೆ ಅಧಿಕ ಲಾಭದ ಆಸೆತೋರಿಸಿ ಮಹಿಳಾ ಟೆಕ್ಕಿಗೆ ಬರೋಬ್ಬರಿ 93 ಲಕ್ಷ ವಂಚನೆ
ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ, ಪೊಲೀಸ್ ನಿರೀಕ್ಷಕರಾದ ವಸಂತ್, ಸುನೀಲ್ ಕುಮಾರ್, ಶಿಲ್ಪಾ, ನಂಜುಂಡಸ್ವಾಮಿ, ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವಿನಾಯ್ಕ, ಸಚಿನ್,ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.



