ದಾವಣಗೆರೆ: ದಾವಣಗೆರೆ ನಗರದ ರಂಗನಾಥ ಬಡಾವಣೆಯಲ್ಲಿ 2,000 ಮೌಲ್ಯದ ಟಿ.ವಿ.ಕದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು 28 ವರ್ಷಗಳ ಬಳಿಕ ಗ್ರಾಮಾಂತರ ಠಾಣೆಯ ಪೊಲೀಸರ ಬಂಧನ ಮಾಡಿದ್ದಾರೆ.
ದಾವಣಗೆರೆ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಬಿಗಿ ಪೊಲೀಸ್ ಬಂದೋ ಬಸ್ತ್
ದೇವರಾಜ ಅರಸು ಬಡಾವಣೆಯ ಫಕೀರ (50) ಬಂಧಿತ ಆರೋಪಿ. 28 ವರ್ಷ ನಂತರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಿದ್ದಾರೆ. ಇನ್ನೊಬ್ಬ
ಆರೋಪಿ ರಾಜ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ದಾವಣಗೆರೆ: ಹೂಡಿಕೆ ಮಾಡಿದ್ರೆ ಅಧಿಕ ಲಾಭದ ಆಸೆತೋರಿಸಿ ಮಹಿಳಾ ಟೆಕ್ಕಿಗೆ ಬರೋಬ್ಬರಿ 93 ಲಕ್ಷ ವಂಚನೆ
ಆರೋಪಿಗಳು ರಂಗನಾಥ ಬಡಾವಣೆಯ ರುದ್ರಯ್ಯ ಎಂಬುವರ
ಮನೆಯಲ್ಲಿ 1998ರ ಸೆ.23ರಂದು ಟಿ.ವಿ ಕಳ್ಳತನ ಮಾಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ರವಿ ಮತ್ತು
ಮುನಾವರ್ ಎಂಬುವರನ್ನು ಬಂಧಿಸಿ ಕಳ್ಳತನವಾಗಿದ್ದ ಟಿ.ವಿ ವಶಕ್ಕೆ ಪಡೆದಿದ್ದರು. ಕೃತ್ಯದಲ್ಲಿ ಭಾಗಿಯಾಗಿದ್ದ ಫಕೀರ
ಹಾಗೂ ರಾಜ ತಲೆಮರೆಸಿಕೊಂಡಿದ್ದರು.
ನೂತನ ಎಸ್ಪಿ ಎಚ್.ಟಿ. ಶೇಖರ್ ನಿರ್ದೇಶನದ
ಮೇರೆಗೆ ಪತ್ತೆಗೆ ಮುಂದಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



