ದಾವಣಗೆರೆ: ಇತ್ತೀಚೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್ನಲ್ಲಿ ನಡೆದ ಸಂತ ಸೇವಾಲಾಲ್ ಜಯಂತ್ಯೋತ್ಸವದಲ್ಲಿ ಭಾಗಿಯಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಗೋ ಬ್ಯಾಕ್ ಡಿಸಿಎಂ ಎಂದು ಘೋಷಣೆ ಕೂಗಿದ್ದ ಬಂಜಾರ ಸಮುದಾಯದ ಯುವಕರ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಕುಸಿತ; ಕ್ವಿಂಟಾಲ್ ದರ 57 ಸಾವಿರಕ್ಕೆ ಇಳಿಕೆ
ರಾಜ್ಯ ಸರ್ಕಾರ ಜಾರಿಗೆ ತಂದ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ನ್ಯಾಮತಿಯ ಸೂರಗೊಂಡನಕೊಪ್ಪದಲ್ಲಿ ಫೆ.14ರಂದು ನಡೆದ ಜಯಂತ್ಯೋತ್ಸವದಲ್ಲಿ ಕೆಲ ಯುವಕರು ಡಿಸಿಎಂ ವಿರುದ್ಧ ಕಪ್ಪುಬಟ್ಟೆ ಪ್ರದರ್ಶಿಸ ವ ‘ಗೋ ಬ್ಯಾಕ್’ ಘೋಷಣೆ ಕೂಗಿದ್ದರು.
ದಾವಣಗೆರೆ: ಫೆ.23ರಂದು ಉದ್ಯೋಗ ಮೇಳ
ಕೆಲಕಾಲ ಸಮಾರಂಭದಲ್ಲಿ ಗೊಂದಲ, ಆತಂಕ ಉಂಟಾಗಿತ್ತು. ಹೀಗಾಗಿ ಕಪ್ಪುಬಟ್ಟೆ ಪ್ರದರ್ಶಿಸಿ, ಘೋಷಣೆ ಕೂಗಿದ 25ರಿಂದ 30 ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಕರಣ ಹಿಂಪಡೆಯಲು ಆಗ್ರಹ
ಕಪ್ಪುಬಟ್ಟೆ ಪ್ರದರ್ಶನ ಮಾಡಿದ ಯುವಕರ ವಿರುದ್ಧ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕು ಎಂದು ಕರ್ನಾಟಕ ತಾಂಡ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಯ್ಕ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಒಳಮೀಸಲಾತಿಗೆ ವಿಚಾರದಲ್ಲಿ ಆಕ್ರೋಶಗೊಂಡ ಯುವಕರು ಈ ಕೃತ್ಯ ಎಸಗಿದ್ದಾರೆ. ಉದ್ದೇಶಪೂರ್ವಕವಾಗಿ ನಡೆದಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಮಾಲಾಧಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು ಖಂಡನೀಯ ಎಂದರು.
ಬಂಜಾರ ಹೋರಾಟ ಸಮಿತಿಯ ಕೆ. ತಾರೇಶ್, ಕುಮಾರ ನಾಯ್ಕ, ಈಶ್ವರ ನಾಯ್ಕ ಇದ್ದರು.



