Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ

ದಾವಣಗೆರೆ

ದಾವಣಗೆರೆಯಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ

 

ಡಿವಿಜಿ ಸುದ್ದಿ, ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ವತಿಯಿಂದ ಇಂದು ಎ.ವಿ.ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭೆ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಜಿ.ಪಂ ಅಧ್ಯಕ್ಷೆ ಯಶೋಧಮ್ಮ ಮರಳಪ್ಪ, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ ಸಿದ್ದೇಶ್ವರ, ದಾವಣಗೆರೆ ಉತ್ತರ ಕ್ಷೇತ್ರದ ವಿಧಾನಸಭೆ ಶಾಸಕರಾದ ಎಸ್.ಎ ರವೀಂದ್ರನಾಥ್ ಹಾಗೂ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ಮಹಾನಗರಪಾಲಿಕೆ ಮೇಯರ್ ಬಿ.ಜೆ ಅಜಯ್‍ಕುಮಾರ್, ಹರಿಹರ–ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪ ವಿಭಾಗಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಎ.ವಿ.ಕೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಶಿವಪ್ರಕಾಶ್.ಪಿ.ಎಸ್ ಉಪಸ್ಥಿತರಿರಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top