ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ; ಎಲ್ಲೆಲ್ಲಿ..?
ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್. ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್ಸೈಟ್ http://kmcdc.karnataka.gov.in/kn/ ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-29903994 ಮತ್ತು 8867537799 ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.



