ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪರಿಶೀಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು (Davangere-Chitradurga-Tumkur direct train) ಮಾರ್ಗವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಇಂದು (ಫೆ.26) ಪರಿಶೀಲನೆ ನಡೆಸಿದರು.

ವಿಶೇಷ ರೈಲಿನಲ್ಲಿ ಬೆಂಗಳೂರಿನಿಂದ ದಾವಣಗೆರೆಗೆ ಸಚಿವ ಸೋಮಣ್ಣ‌ ದಾವಣಗೆರೆಯ ತೋಳಹುಣಸೆ ರೈಲು ನಿಲ್ದಾಣದಿಂದ ಪರಿಶೀಲನೆ ನಡೆಸಿದರು. ಬ್ಯಾಟರಿ ಚಾಲಿತ ಮೋಟಾರು ಟ್ರಾಲಿಯಲ್ಲಿ ರೈಲು ಹಳಿಯ ಮೇಲೆ ಸಾಗಿ ಪರಿಶೀಲಿಸಿದರು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹರಿಹರ ಸೇರಿದ್ರೆ ಇನ್ನಷ್ಟು ಅಭಿವೃದ್ಧಿ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈಗಾಲೇ ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಗ್ರಾಮದ ವರೆಗೆ ಪೂರ್ಣಗೊಂಡಿದೆ. ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಕೆಲವಡೆ ಹಳಿ‌ ಹಾಕಲಾಗಿದೆ.

ದಾವಣಗೆರೆ ಮಹಾನಗರ ಪಾಲಿಕೆ; ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು- ದಾವಣಗೆರೆ ಅಂತರ ಕಡಿಮೆ

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗವು ಇಲ್ಲಿನ ಜನರ ಬಹುಕಾಲದ ಕನಸು. ಈ ಯೋಜನೆ ಪೂರ್ಣಗೊಂಡರೆ ಬೆಂಗಳೂರು-ದಾವಣಗೆರೆ ನಡುವಿನ ಅಂತರ ಕಡಿಮೆ ಆಗಲಿದೆ. ರೈಲುಗಳು ಅರಸೀಕೆರೆ ಮೂಲಕ ಸಾಗುವುದು ತಪ್ಪಲಿದ್ದು, ಪ್ರಯಾಣದ ಸಮಯ ಉಳಿತಾಯ ಆಗಲಿದೆ.

ಈ ಸಂದರ್ಭದಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಜೊತೆಗೆ ಇದ್ದರು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *