ದಾವಣಗೆರೆ; ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ; ಎರಡು ಬಣ ನಡುವಿನ ಸಂಧಾನ ವಿಫಲ; ಬೂತ್ ಮಟ್ಟದ ಕಾರ್ಯಕ್ರಮದಿಂದ ದೂರ ಉಳಿದ ಸಿದ್ದೇಶ್ವರ ಬಣ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿ ಇರುವಾಗಲೇ ಬಿಜೆಪಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ. ರೇಣುಕಾಚಾರ್ಯ ಮತ್ತು ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ ಬಣ ನಡುವಿನ ಭಿನ್ನಮತ ಶಮನಗೊಳಿಸಲು ಬಿಜೆಪಿ ರಾಷ್ಟ್ರೀಯ, ರಾಜ್ಯ ನಾಯಕರ ಕರೆದ ಸಭೆ ವಿಫಲವಾಗಿದೆ. ನಗರದಲ್ಲಿ ದಾವಣಗೆರೆ ದಕ್ಷಿಣ ಬಿಜೆಪಿ ಬೂತ್ ಮಟ್ಟದ ಕಾರ್ಯಕ್ರಮದಿಂದ ಜಿ.ಎಂ. ಸಿದ್ದೇಶ್ವರ, ಬಿ.ಪಿ. ಹರೀಶ್ ನೇತೃತ್ವದ ಬಣ ದೂರ ಉಳಿದಿದೆ.

ದಾವಣಗೆರೆ: ಉಚಿತ ಲಘು, ಭಾರೀ ವಾಹನ ಚಾಲನಾ ತರಬೇತಿ ಪರವಾನಗಿ ವಿತರಣೆ

ಜಿಲ್ಲಾ ಬಿಜೆಪಿ ಎರಡು ವಣ ಭಿನ್ನಮತ ಶಮನಗೊಳಿಸಲು ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್‌ ಅಗರವಾಲ್‌ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು (ಮಾ.05) ಇಡೀ ದಿನ ಪ್ರಯತ್ನಪಟ್ಟರು‌. ಆದರೆ, ಅವರ ಸಂಧಾನ ಸಫಲವಾಗಲಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಇತ್ತೀಚಿಗೆ ದಾವಣಗೆರೆ ಹಲವು ಕೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು ಸಿದ್ದೇಶ್ವರ ಬಣಕ್ಕೆ ತೀವ್ರ ಬೇಸರ ಮೂಡಿಸಿತ್ತು.

ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ನಿಯೋಜನೆಗೊಂಡ ಪಕ್ಷದ ಬೂತ್‌ ಮಟ್ಟದ ಕಾರ್ಯಕರ್ತರು ಹಾಗೂ ವಿಸ್ತಾರಕರನ್ನು ಅಭಿನಂದಿಸುವ ಕಾರ್ಯಕ್ರಮದಿಂದ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ.ಹರೀಶ್‌ ಬಣ ದೂರ ಉಳಿದರು.

ಮತ್ತೊಮ್ಮೆ ಬರುವುದಾಗಿ ತಿಳಿಸಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರವಾಲ್‌ ಸಭೆಯಲ್ಲಿ ಕಾರ್ಯಕರ್ತರಿಗ ತಿಳಿಸಿ ಹೊರಟು ಹೋದರು. ಈ ಮೂಲಕ ಜಿಲ್ಲಾ ಬಿಜೆಪಿ ಬಣ ಬಡಿದಾಟಕ್ಕೆ ಕಡಿವಾಣ ಹಾಕುವಲ್ಲಿ ಸಭೆ ವಿಫಲವಾಯಿತು.

ರೇಣುಕಾಚಾರ್ಯ ಟೀಂ ಜತೆ ಪ್ರತ್ಯೇಕ ಸಭೆ

ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್‌.ಎ. ರವೀಂದ್ರನಾಥ್‌ ಬಣದ ಜೊತೆಗೆ ರಾಧಾಮೋಹನದಾಸ್‌ ಅಗರವಾಲ್‌ ಹಾಗೂ ಬಿ.ವೈ. ವಿಜಯೇಂದ್ರ ರೆಸಾರ್ಟ್‌ನಲ್ಲಿ ಒಂದೂವರೆ ಗಂಟೆ ಸಭೆ ನಡೆಸಿದರು. ಮಾಜಿ ಸಚಿವ ಕರುಣಾಕ ರೆಡ್ಡಿ, ಸೇರಿದಂತೆ ಅನೇಕರ ಭಾಗಿಯಾಗಿದ್ರು.

ರೇಣುಕಾಚಾರ್ಯ ಹಠಾವೋ, ಬಿಜೆಪಿ ಬಚಾವೋ ಘೋಷಣೆ

ರೇಣುಕಾಚಾರ್ಯ ಹಠಾವೋ, ಬಿಜೆಪಿ ಬಚಾವೋ’ ಎಂಬುದಾಗಿ ಸಿದ್ದೇಶ್ವರ ಬೆಂಬಲಿಗರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಬಿ.ಪಿ. ಹರೀಶ್‌ ಬಣದ ಜೊತೆಗೆ ಇಬ್ಬರು ನಾಯಕರು ಮಧ್ಯಾಹ್ನ ಸುದೀರ್ಘ ಸಭೆ ನಡೆಸಿದರು. ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ, ಮಾಜಿ ಶಾಸಕ ಎಚ್‌.ಪಿ.ರಾಜೇಶ್‌ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಬಿಜೆಪಿಯಲ್ಲಿ‌ ಸಮಸ್ಯೆಗಳ ಬಗ್ಗೆ ಅರಿವಿದೆ‌. ಈ‌ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡು ದಾವಣಗೆರೆ ಉಪ ಚುನಾವಣೆ ಗೆಲ್ಲುವ ಪಣತೊಟ್ಟಿದ್ದೇವೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸಚಿವರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್‌ ಅಗರವಾಲ್‌ ಬಳಿ ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಇದಕ್ಕೆ ಸ್ಪಂದಿಸುವ ಆಶ್ವಾಸನೆ ಸಿಕ್ಕಿದೆ. ಈಗ ಏನೂ ಹೇಳುವುದಿಲ್ಲ. ಅವರು ಟಿಕೆಟ್ ಘೋಷಣೆ ಮಾಡಲಿ ಆಮೇಲೆ ಮಾತನಾಡುತ್ತೇವೆ.

-ಜಿ.ಎಂ. ಸಿದ್ದೇಶ್ವರ, ಕೇಂದ್ರದ ಮಾಜಿ

ಜಿಲ್ಲೆಯ ಬಿಜೆಪಿ ಕಾರ್ಯಕರ್ತರು, ನಾಯಕರಲ್ಲಿ ಸಣ್ಣ -ಪುಟ್ಟ ಸಮಸ್ಯೆ ಇದೆ. ಇದನ್ನು ಶೀಘ್ರವಾಗಿ ಎಲ್ಲರೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು. ಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಠಿಯಿಂದ ನಾನು ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರವಾಲ್ ಇಲ್ಲಿಗೆ ಬಂದಿದ್ದೇವೆ.‌ ಸಮಸ್ಯೆ ಬಗೆಹರಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತೇವೆಂದು ತಿಳಿಸಿದರು.‌

ದಾವಣಗೆರೆ ದಕ್ಷಿಣಕ್ಕೆ ಸೂಕ್ತ ಅಭ್ಯರ್ಥಿ

ದಾವಣಗೆರೆ ದಕ್ಷಿಣಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಈಗಾಗಲೇ 8-10 ಅಕಾಂಕ್ಷಿಗಳು ಇದ್ದಾರೆ. ಅದರಲ್ಲಿ ಸೂಕ್ತ ಅಭ್ಯರ್ಥಿ ಯಾರು..? ಎಂಬುದರ ಬಗ್ಗೆ ಎಲ್ಲರೂಂದಿಗೆ ಕುಳಿತು ತಿರ್ಮಾನ ಮಾಡಲಾಗುವುದು. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಜೊತೆಗೂ ಉಪ‌ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಪಕ್ಷ ಸಂಘಟನೆ ಬಗ್ಗೆ 150 ವಿಸ್ತಾರಕರು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬೂತ್ ಮಟ್ಟದ ಸಮಸ್ಯೆಗಳ ಬಗ್ಗೆ ಹಾಗೂ ಕಾರ್ಯಕರ್ತರ ಸಮಸ್ಯೆಗಳನ್ನು ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿ ಎಲ್ಲ ಸಮಸ್ಯೆ ಸರಿಪಡಿಸಿಕೊಂಡು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಪಣತೊಟ್ಟಿದ್ದೇವೆ ಎಂದರು.

2028ರ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿ.ಎಸ್‌. ಯಡಿಯೂರಪ್ಪ ಅವರು ಬಿಜೆಪಿಯನ್ನು ಗುತ್ತಿಗೆ ಹಿಡಿದಿರುವಂತೆ ವರ್ತಿಸುತ್ತಿದ್ದಾರೆ.

-ಬಿ.ಪಿ.ಹರೀಶ್‌, ಹರಿಹರ ಶಾಸಕ

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *