ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣದ ವತಿಯಿಂದ ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಮಾ. 27ರಂದು ‘ವಿಶ್ವ ರಂಗಭೂಮಿ ದಿನಾಚರಣೆ ಮತ್ತು ರಾಷ್ಟ್ರೀಯ ವೃತ್ತಿ ರಂಗೋತ್ಸವ-26’ ಅಂಗವಾಗಿ ಪೌರಾಣಿಕ ನಾಟಕಗಳ ಏಕವ್ಯಕ್ತಿ ಪಾತ್ರ ಸ್ಪರ್ಧೆ ಏರ್ಪಡಿಸಲಾಗಿದೆ.
ಪ್ರಥಮ ಬಹುಮಾನ 25 ಸಾವಿರ ರೂ., ದ್ವಿತೀಯ 15 ಸಾವಿರ ರೂ., ತೃತೀಯ 10 ಸಾವಿರ ರೂ. ಮತ್ತು ಸಮಾಧಾನಕರ ಬಹುಮಾನವಾಗಿ 5 ಸಾವಿರ ರೂ. ನೀಡಲಾಗುವುದು ಎಂದು ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ. 93410 10712 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಬರುವ ಮಾರ್ಚ್ 20 ಕಡೆಯ ದಿನವಾಗಿದೆ. ಆಸಕ್ತರು ಜಿಲ್ಲಾಡಳಿತ ಭವನದಲ್ಲಿರುವ ರಂಗಾಯಣದ ಕಚೇರಿಗೆ ಲಿಖಿತ ಅರ್ಜಿ ಸಲ್ಲಿಸಬೇಕು.
ದಾವಣಗೆರೆ: ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ
ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಷ್ಟ ಪರಿಸ್ಥಿತಿಯಲ್ಲಿದ್ದು ಮಾಸಾಶನ ಪಡೆಯುತ್ತಿರುವ ಸಾಹಿತಿಗಳು, ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ.
ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಪಾಸ್ಪೋರ್ಟ್ ಸೈಜ್ ಫೋಟೋ, ಬ್ಯಾಂಕ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧ ಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 27, ದಾವಣಗೆರೆ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಮಾ. 31 ರೊಳಗಾಗಿ ಕಳುಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
ದಾವಣಗೆರೆ: ಉಚಿತ ಲಘು, ಭಾರೀ ವಾಹನ ಚಾಲನಾ ತರಬೇತಿ ಪರವಾನಗಿ ವಿತರಣೆ



