Connect with us

Dvgsuddi Kannada | online news portal | Kannada news online

ನಿಶ್ಚಿತಾರ್ಥ ಸಮಾರಂಭದಲ್ಲಿ ಊಟ ಮಾಡಿದ 200 ಜನ ಅಶ್ವಸ್ಥ;  ಆಸ್ಪತ್ರೆಗೆ ದಾಖಲು

ಪ್ರಮುಖ ಸುದ್ದಿ

ನಿಶ್ಚಿತಾರ್ಥ ಸಮಾರಂಭದಲ್ಲಿ ಊಟ ಮಾಡಿದ 200 ಜನ ಅಶ್ವಸ್ಥ;  ಆಸ್ಪತ್ರೆಗೆ ದಾಖಲು

ಡಿವಿಜಿ ಸುದ್ದಿ, ಬೀದರ್: ನಿಶ್ಚಿತಾರ್ಥ ಸಮಾರಂಭದಲ್ಲಿ ಊಟ ಮಾಡಿದ 200ಕ್ಕೂ ಅಧಿಕ ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಸ್ತಾಪುರ ಗ್ರಾಮದಲ್ಲಿ  ಈ ಘಟನೆ ನಡೆದಿದೆ.  ಮಾರುತಿ ಪಾಟೀಲ ಎಂಬವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ಹಿನ್ನೆಲೆ ಮಧ್ಯಾಹ್ನ  ಊಟ ಮಾಡಿದ ಜನರಿಗೆ ವಾಂತಿ ಭೇದಿ ಶುರುವಾಗಿದ್ದು, ವಾಂತಿ ಭೇದಿಯಿಂದ ಜನರ ಅಸ್ವಸ್ಥರಾಗಿದ್ದು,  ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಸ್ತಾಪುರ ಗ್ರಾಮದ ಯುವತಿಯನ್ನು ನಾರಾಯಣಪೂರ ಗ್ರಾಮದ ಯುವಕನೊಂದಿಗೆ ನಿಶ್ಚಿತಾರ್ಥ ನಡೆಸಲಾಗುತ್ತಿತ್ತು. ಮುಸ್ತಾಪುರ ಸೇರಿದಂತೆ ಮುಚಳಂಬ, ನಾರಾಯಣಪೂರ ಗ್ರಾಮದಿಂದ ಆಗಮಿಸಿದ ಸಂಬಂಧಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಊಟ ಮಾಡಿದರು. ಸುಮಾರು 600ರಷ್ಟು ಜನರಿಗೆ ಊಟ ಮಾಡಿದ್ದು, ಇದರಲ್ಲಿ ಸುಮಾರು 200ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ ಶುರುವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ  ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತ ಭಂವರಸಿಗ್ ಮೀನಾ, ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‍ಐ ಸುನೀಲಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top