ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮದ ರೈತರ ಮೆಕ್ಕೆಜೋಳ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ 4.75 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾದ ಘಟನೆ ನಡೆದಿದೆ. ಖಾಲಿ ಜಮೀನಿನಲ್ಲಿ ಸಂಗ್ರಹಿಸಿಡಲಾಗಿದ್ದ ಮೆಕ್ಕೆಜೋಳಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ.
ಗ್ರಾಮದ ರೈತ ಬಸಪ್ಪ ಅವರ ಎಂಟು ಎಕರೆ ಜಮೀನಿನಲ್ಲಿ ಬೆಳೆದ
250 ಕ್ವಿಂಟಲ್ ಮೆಕ್ಕೆಜೋಳದ ರಾಶಿ ಭಸ್ಮವಾಗಿದೆ. ಅಂದಾಜು 3.50 ಲಕ್ಷವಾಗಿದೆ. ಇನೊಬ್ಬ ರೈತ ವೀರಬಸಪ್ಪ ಅವರ ಎರಡು
ಎಕರೆ ಜಮೀನಿನಲ್ಲಿ ಬೆಳೆದ ಅಂದಾಜು 70 ಕ್ವಿಂಟಲ್ ಮೆಕ್ಕೆಜೋಳ ಆಕಸ್ಮಿಕ ಬೆಂಕಿ ಅವಘಡದಿಂದ ಸುಟ್ಟು ಹೋಗಿದೆ. ಅಂದಾಜು 1.25 ಲಕ್ಷ ನಷ್ಟವಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಮತ್ತು ಹೊನ್ನಾಳಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.



