ದಾವಣಗೆರೆ: ಮಾದರಿ ನೀತಿ ಸಂಹಿತೆ ಜಾರಿ: ಮಾ. 23ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ-ಮಾ.26 ಹಿಂಪಡೆಯಲು ಕೊನೆ ದಿನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
5 Min Read

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದ್ದು, ಮಾರ್ಚ್ 15 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾದ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ದಾವಣಗೆರೆ ಬಿಜೆಪಿಯಲ್ಲಿ ಒಗ್ಗಟ್ಟು; ಯಾರಿಗೇ ಟಿಕೆಟ್ ಕೊಟ್ಟರು ಕೆಲಸ; ವಿನಯ್ ಕುಮಾರ್ ಟಿಕೆಟ್ ನೀಡಿದರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು.

ಚುನಾವಣೆ‌ ಪ್ರಕ್ರಿಯೆ ಪ್ರಮುಖ ಅಂಶಗಳು

  • ನಾಮಪತ್ರ ಸಲ್ಲಿಕೆಯು ಮಾರ್ಚ್ 16 ರಿಂದ ಪ್ರಾರಂಭ
  • ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಕೊನೆಯ ದಿನ
  • ನಾಮಪತ್ರಗಳ ಪರಿಶೀಲನೆಯು ಮಾರ್ಚ್ 24
  • ನಾಮಪತ್ರ ಹಿಂಪಡೆಯಲು ಮಾರ್ಚ್ 26 ಕೊನೆಯ ದಿನ
  • ಮತದಾನ ಏಪ್ರಿಲ್ 9 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ
  • ಮೇ 4ರಂದು ಫಲಿತಾಂಶ

ಚುನಾವಣಾಧಿಕಾರಿಗಳ ಕಚೇರಿಯು ಪಾಲಿಕೆ ಮುಖ್ಯ ಕಚೇರಿಯಲ್ಲಿದ್ದು ಇಲ್ಲಿಯೇ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ ಎಂದರು.

ಮಾದರಿ ನೀತಿ ಸಂಹಿತೆ ಮತ್ತು ನಿರ್ಬಂಧಗಳು

ಚುನಾವಣಾ ಘೋಷಣೆಯಾದ ಮಾರ್ಚ್ 15 ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು ಮೇ 6 ರ ವರೆಗೆ ಜಾರಿಯಲ್ಲಿರುತ್ತದೆ. ದಾವಣಗೆರೆ ಮಹಾನಗರ ಪಾಲಿಕೆ ಮತ್ತು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಮಾತ್ರ ನೀತಿ ಸಂಹಿತೆ ಸೀಮಿತವಾಗಿದೆ ಎಂದರು.

ಫ್ಲೆಕ್ಸ್, ಬ್ಯಾನರ್, ಸರ್ಕಾರಿ ಜಾಹೀರಾತು ತೆರವು

ಚುನಾವಣಾ ಕರಪತ್ರ, ಪೋಸ್ಟರ್ ಪ್ರಕಟಣೆ ಕುರಿತು ಪ್ರಿಂಟಿಂಗ್ ಪ್ರೆಸ್ ಮಾಲೀಕರು ಯಾವುದೇ ಪ್ರಚಾರ ಸಾಮಗ್ರಿ ಮುದ್ರಿಸುವ ಮೊದಲು ರಿಟನಿರ್ಂಗ್ ಆಫೀಸರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯ, ನಗರದಲ್ಲಿರುವ ರಾಜಕೀಯ ವ್ಯಕ್ತಿಗಳ ಫ್ಲೆಕ್ಸ್, ಬ್ಯಾನರ್ ಹಾಗೂ ಸರ್ಕಾರಿ ಜಾಹೀರಾತುಗಳನ್ನು 24 ಗಂಟೆಯೊಳಗೆ ತೆರವುಗೊಳಿಸಲು ಈಗಾಗಲೇ ತಂಡಗಳನ್ನು ರಚಿಸಲಾಗಿದೆ ಎಂದರು.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ಮಾತು ನಂಬಿ 47.85 ಲಕ್ಷ ಕಳೆದುಕೊಂಡ ಮಹಿಳೆ..!!

50 ಸಾವಿರಕ್ಕಿಂತ ಹೆಚ್ಚು ಹಣ ಸಾಗಿಸುವಂತಿಲ್ಲ

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಒಬ್ಬ ವ್ಯಕ್ತಿ ರೂ. 50 ಸಾವಿರದ ವರೆಗೆ ನಗದು ಸಾಗಣೆ ಮಾಡಬಹುದು, ಅದಕ್ಕಿಂತಲೂ ಹೆಚ್ಚಿನ ನಗದು ಸಾಗಣೆ ಮಾಡಬೇಕಾದಲ್ಲಿ ಅಗತ್ಯ ದಾಖಲೆಗಳು ಇರಬೇಕು, ಇಲ್ಲವಾದಲ್ಲಿ ಚುನಾವಣಾ ಸ್ಕ್ವಾಡ್‍ಗಳು ವಶಪಡಿಸಿಕೊಳ್ಳಲಿವೆ. ದಾಖಲೆಗಳಿಲ್ಲದೆ ನಗದು ಸಾಗಣೆ ಮಾಡಿದಲ್ಲಿ ವಶಪಡಿಸಿಕೊಳ್ಳಲಾಗುತ್ತದೆ. ಕ್ಯಾಶ್ ಸೀಜರ್ ಸಮಿತಿ ಎದುರು ಹಾಜರಾಗಿ ದಾಖಲೆಗಳನ್ನು ಒದಗಿಸಿ ಪಡೆಯಬಹುದು ಎಂದರು.

ಮತದಾರರ ಅಂಕಿ-ಅಂಶ; ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳಿದ್ದು, ಇದರಲ್ಲಿ 234 ನಗರ ವ್ಯಾಪ್ತಿಯಲ್ಲಿದ್ದರೆ, 50 ಗ್ರಾಮೀಣ ಭಾಗದಲ್ಲಿವೆ. ಒಟ್ಟು 284 ಮತಗಟ್ಟೆಗಳಲ್ಲಿ ಪುರುಷ 1,13,654, ಮಹಿಳೆಯರು 1,17,986, ತೃತೀಯ ಲಿಂಗಿಗಳು 43 ಸೇರಿ ಒಟ್ಟು 2,31,683 ಮತದಾರರಿದ್ದಾರೆ. ಇದರಲ್ಲಿ ಪುರುಷರು 1,452 ಪುರುಷ, 1,322 ಮಹಿಳಾ ಸೇರಿ ಒಟ್ಟು 2,774 ಯುವ ಮತದಾರರಿದ್ದಾರೆ, ವಿಶೇಷ ಚೇತನರಲ್ಲಿ ಪುರುಷರು 1,379, ಮಹಿಳೆಯರು 1,139 ಒಟ್ಟು 2,518 ವಿಶೇಷ ಚೇತನ ಮತದಾರರಿದ್ದಾರೆ. 85 ವರ್ಷಗಳಿಗಿಂತ ಹೆಚ್ಚು ವಯೋಮಾನದ 928 ಪುರುಷರು, 1,138 ಮಹಿಳೆಯರು ಸೇರಿ ಒಟ್ಟು 2,066 ಮತದಾರರಿದ್ದಾರೆ, ಇವರುಗಳಿಗೆ ಮನೆಯಿಂದಲೇ ಅಂಚೆ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಕೇವಲ ಎಪಿಕ್ ಕಾರ್ಡ್ ಹೊಂದಿದ್ದರೆ ಮಾತ್ರ ಮತ ಚಲಾಯಿಸಲು ಸಾಧ್ಯವಿಲ್ಲ, ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿದ ಅಂತಿಮ ದಿನಾಂಕದ 10 ದಿನಗಳ ಮೊದಲೇ ಅಂದರೆ ಮಾರ್ಚ್ 24 ರೊಳಗೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ನಾಮಪತ್ರ ಸಲ್ಲಿಸಿದ ದಿನದಿಂದ ಫಲಿತಾಂಶ ಘೋಷಣೆಯಾಗುವವರೆಗೆ ಎಲ್ಲಾ ವೆಚ್ಚಗಳ ಲೆಕ್ಕಪತ್ರವನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಪ್ರತಿ ಅಭ್ಯರ್ಥಿಯು ಚುನಾವಣಾ ವೆಚ್ಚಕ್ಕಾಗಿ ಪ್ರತ್ಯೇಕ ಬ್ಯಾಂಕ್ ಖಾತೆಯನ್ನು ತೆರೆಯಬೇಕು. ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಗರಿಷ್ಠ ವೆಚ್ಚದ ಮಿತಿಯನ್ನು ರೂ. 40 ಲಕ್ಷಗಳಿಗೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ವೆಚ್ಚದ ವಿವರಗಳನ್ನು ನೋಡಿಕೊಳ್ಳಲು ಒಬ್ಬ ‘ಚುನಾವಣಾ ವೆಚ್ಚ ಏಜೆಂಟ್’ ಅನ್ನು ನೇಮಿಸಿಕೊಳ್ಳಬಹುದು ಎಂದು ತಿಳಿಸಿದರು.

ಚುನಾವಣೆ ಉಸ್ತುವಾರಿಗಾಗಿ 3 ಅಧಿಕಾರಿಗಳ 8 ಫ್ಲೈಯಿಂಗ್ ಸ್ಕ್ವಾಡ್ ತಂಡ, ವಿಡಿಯೋ ಸರ್ವೆಲೆನ್ಸ್ ತಂಡ, ವೀಡಿಯೋ ವೀಕ್ಷಕರ ತಂಡ, ಲೆಕ್ಕಪತ್ರ ತಂಡ ಸೇರಿದಂತೆ ದಕ್ಷಿಣ ಕ್ಷೇತ್ರದ ಎಲ್ಲಾ ಗಡಿ ಸೇರಿದಂತೆ 12 ಕಡೆ ಚೆಕ್-ಪೆÇೀಸ್ಟ್‍ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಎಸ್.ಐ ಒಳಗೊಂಡ ಪೆÇಲೀಸ್, ಅಬಕಾರಿ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದಂತೆ ಮತದಾರರಿಗೆ ಆಮಿಷವೊಡ್ಡುವ ಬಗ್ಗೆ, ಅನಧಿಕೃತ ಮದ್ಯ ಮಾರಾಟ, ಹಣ ಹಂಚಿಕೆ ಇತ್ಯಾದಿ ಅಂಶಗಳ ಬಗ್ಗೆ ಸಾರ್ವಜನಿಕರು ದೂರು ನೀಡಲು ವೆಚ್ಚ ಮೇಲ್ವಿಚಾರಣಾ ನಿಯಂತ್ರಣ ಕೊಠಡಿ ಮತ್ತು ಕರೆ ಕೇಂದ್ರ ಪ್ರಾರಂಭಿಸಲಾಗಿದೆ. ಮತದಾರರ ಪಟ್ಟಿಯ ಬಗ್ಗೆ ಹಾಗೂ ವೆಚ್ಚಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ದೂರುಗಳಿಗೆ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಿ, ದೂರು ನೀಡಬಹುದಾಗಿದೆ.

ಸಿವಿಜಿಲ್ ಆಪ್ ಬಳಸಿ

ಮುಕ್ತ, ನ್ಯಾಯಸಮ್ಮತ, ಚುನಾವಣೆಗಾಗಿ ಸಿ.ವಿಜಿಲ್ ಮೊಬೈಲ್ ಅಪ್ಲಿಕೇಷನ್ ಬಳಸಿ ಅಭ್ಯರ್ಥಿ, ರಾಜಕೀಯ ಪಕ್ಷಗಳ ಮುಖಂಡರು ಮತದಾನ ಮಾಡಲು ಆಮಿಷವೊಡ್ಡಿದಲ್ಲಿ, ಲಂಚ, ಉಡುಗೊರೆ ನೀಡಿದಲ್ಲಿ ವಾಸ್ತವದ ಫೋಟೋ ಮತ್ತು ವೀಡಿಯೋ ತುಣುಕುಗಳನ್ನು ಅಪ್‍ಲೋಡ್ ಮಾಡುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯಬಹುದಾಗಿದೆ. ಈ ಅಪ್‍ಡೌನ್ ಲೋಡ್ ಮಾಡಿಕೊಂಡು ಅಕ್ರಮ ತಡೆಗೆ ಸಾರ್ವಜನಿಕರು ಮುಂದಾಗಬೇಕೆಂದರು.

ನೋಟಾಗೆ ಅವಕಾಶ

ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನ ಹಾಗೂ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಇಚ್ಚೆ ಇಲ್ಲದಿದ್ದಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ಅಭ್ಯರ್ಥಿಗಳ ಹೆಸರಿನ ಕೆಳಗೆ ನೋಟಾ ಒತ್ತಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪಾರದರ್ಶಕತೆಗಾಗಿ ಮತದಾನದ ದಿನದಂದು ಅಂತರ್ಜಾಲ ಬಳಸಿ ಮತಗಟ್ಟೆಗಳಿಂದ ವೆಬ್ಕಾಸ್ಟಿಂಗ್ ಮಾಡಲಾಗುವುದು. ಪೇಯ್ಡ್ ನ್ಯೂಸ್ ವಿರುದ್ಧ ಎಂ.ಸಿ.ಎಂ.ಸಿ ಸಮಿತಿ ನಿಗಾ ವಹಿಸಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನಧಿಕೃತ ಅಥವಾ ಸುಳ್ಳು ಸುದ್ದಿ ಹರಡುವ ಯೂಟ್ಯೂಬಸ್ರ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾಧಿಕಾರಿಯಾಗಿ ದಾವಣಗೆರೆ ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್ ಇವರ ಮೊಬೈಲ್ ಸಂಖ್ಯೆ: 9845482973. ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಡಾ. ಅಶ್ವತ್ಥ್ ಎಂ.ರಿವರ ಮೊಬೈಲ್ ಸಂಖ್ಯೆ: 9901446664 ಇವರುಗಳನ್ನು ನೇಮಿಸಲಾಗಿದೆ ಎಂದರು.

ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ 24×7 ವಾರ್ ರೂಂ ಮತ್ತು ಕಚೇರಿ ಕಾರ್ಯನಿರ್ವಹಿಸಲಿದ್ದು, ಪಾರದರ್ಶಕ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ, ಈ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ಪೆÇಲೀಸ್ ಠಾಣೆಗಳು ಬರಲಿವೆ, ಸೂಕ್ಷ್ಮ ಮತ್ತು ಅತಿಸೂಕ್ಷ ಮತಗಟ್ಟೆಗಳನ್ನು ಗುರುತಿಸಲಾಗಿದೆ 12 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. 10 ಮೊಬೈಲ್ ಸ್ಕ್ವಾಡ್ ಗಳನ್ನು ನಿಯೋಜಿಸಲಾಗಿದೆ. ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಸೂಕ್ತ ಕ್ರಮವಹಿಸಲಾಗಿದೆ, ರೌಡಿಶೀಟರ್‍ಗಳನ್ನು ಗುರುತಿಸಿ ಬಾಂಡ್‍ಓವರ್ ಮತ್ತು ಗಡಿಪಾರು ಮಾಡಲು ಕ್ರಮವಹಿಸಲಾಗಿದೆ ಎಂದರು.

ಸಿಇಒ ಗಿತ್ತೆ ಮಾಧವ ವಿಠಲ್ ರಾವ್ ಮಾತನಾಡಿ ಎಂಸಿಸಿ ನೋಡಲ್ ಅಧಿಕಾರಿಯಾಗಿದ್ದು ಮತದಾರ ಜಾಗೃತಿ ಸ್ವೀಪ್ ಸಮಿತಿ ಅಧ್ಯಕ್ಷನಾಗಿ ಹೆಚ್ಚಿನ ಮತದಾನವಾಗುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *