ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಜೋರು ಮಳೆ ಮುನ್ಸೂಚನೆ; ದಾವಣಗೆರೆಯಲ್ಲಿ ಬಿರು ಗಾಳಿ ಸಹಿತ ಮಳೆ ಎಚ್ಚರಿಕೆ..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ಬಿರುಗಾಳಿ ಸಹಿತ ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಾವಣಗೆರೆಯಲ್ಲಿಯೂ ಸಹ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ‌ ಮಳೆ ಎಚ್ಚರಿಕೆ ನೀಡಲಾಗಿದೆ.

ಆಸ್ತಿ ಖರೀದಿದಾರರಿಗೆ ಮಹತ್ವ‌ದ ಮಾಹಿತಿ‌‌ ನೀಡಿದ ಕಂದಾಯ ಸಚಿವ; ಏನಿದು ಆಟೋ ಮ್ಯುಟೇಶನ್ ..?

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ ಮತ್ತು ಧಾರವಾಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ದಾವಣಗೆರೆ: ಅಡಿಕೆ ಬೆಲೆ ಮತ್ತಷ್ಟು ಕುಸಿತ; ಇಂದಿನ ಕನಿಷ್ಟ, ಗರಿಷ್ಠ ದರ ಎಷ್ಟಿದೆ ..?

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಮಂಡ್ಯ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ‌ ಇದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *