ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ದಾಸಕರಿಯಪ್ಪ; ಬಾಗಲಕೋಟೆಗೆ ವೀರಣ್ಣ ಚರಂತಿಮಠ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಯುಗಾದಿ ಹಬ್ಬದ ದಿನದಂದೇ ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಬಾಗಲಕೋಟೆಯಲ್ಲಿ ಹಳೆಯ ಮತ್ತು ದಾವಣಗೆರೆಯಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಿದೆ.

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಜೋರು ಮಳೆ ಮುನ್ಸೂಚನೆ; ದಾವಣಗೆರೆಯಲ್ಲಿ ಬಿರು ಗಾಳಿ ಸಹಿತ ಮಳೆ ಎಚ್ಚರಿಕೆ..!!

ವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ. ಇಲ್ಲಿ ಬಿಜೆಪಿ ವಾಲ್ಮೀಕಿ ಸಮುದಾಯಕ್ಕೆ ಆದ್ಯತೆ ನೀಡಿದೆ. ಎಸ್.ಟಿ ಮತಗಳನ್ನು ಸೆಳೆಯುವ ಉದ್ದೇಶದಿಂದ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಲಾಗಿದ್ದು, ಕ್ಷೇತ್ರದಲ್ಲಿ ಸಾಮಾಜಿಕ ಸಮತೋಲನ ಕಾಪಾಡಲು ಬಿಜೆಪಿ ಪ್ರಯತ್ನಿಸಿದೆ ಎಂದು ಹೇಳಲಾಗಿದೆ. ಇಲ್ಲಿ ಕಾಂಗ್ರೆಸ್​​​ ಪ್ರಬಲ್ಯ ಇದ್ದು, ಕಾಂಗ್ರೆಸ್​​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ‌ ಕಾರಣದಿಂದ ಉಪಚುನಾವಣೆ ನಡೆಯುತ್ತಿದೆ.

ದಾವಣಗೆರೆ: ಅಡಿಕೆ ಬೆಲೆ ಮತ್ತಷ್ಟು ಕುಸಿತ; ಇಂದಿನ ಕನಿಷ್ಟ, ಗರಿಷ್ಠ ದರ ಎಷ್ಟಿದೆ ..?

ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್​​​​ನಲ್ಲಿ ಭಾರೀ ಗದ್ದಲ ಉಂಟಾಗಿದೆ.ಬಿಜೆಪಿ ತನ್ನ ಅಭ್ಯರ್ಥಿಯನ್ನು ಮೊದಲೇ ಘೋಷಣೆ ಮಾಡುವ ಮೂಲಕ ನೇರ ಪೈಪೋಟಿಗೆ ಇಳಿದಿದೆ.

ಆಸ್ತಿ ಖರೀದಿದಾರರಿಗೆ ಮಹತ್ವ‌ದ ಮಾಹಿತಿ‌‌ ನೀಡಿದ ಕಂದಾಯ ಸಚಿವ; ಏನಿದು ಆಟೋ ಮ್ಯುಟೇಶನ್ ..?

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *