ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಇಂದು (ಮಾ.20) ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಕೆ ಮಾಡಿದರು.
ಟಿಕೆಟ್ ಆಕಾಂಕ್ಷಿಗಳ ಸಾಥ್
ಶ್ರೀನಿವಾಸ ದಾಸಕರಿಯಪ್ಪ ನಾಮಪತ್ರ ಸಲ್ಲಿಸುವ ವೇಳೆ ಯಶವಂತರಾವ್ ಜಾಧವ್, ಬಿ.ಜಿ. ಅಜಯಕುಮಾರ್, ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಅಭ್ಯರ್ಥಿಯೊಂದಿಗೆ ಹಾಜರಿದ್ದು ಬೆಂಬಲ ಸೂಚಿಸಿದರು.
ಸೋಮವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ
ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದರು. ಸೋಮವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಾತನಾಡಿದ ಶ್ರೀನಿವಾಸ ದಾಸಕರಿಯಪ್ಪ, ಈ ದಿನ ಶುಭ ಮುಹೂರ್ತದ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮತದಾರರು ಬಿಜೆಪಿಯನ್ನು ಉತ್ಸುಕರಾಗಿದ್ದಾರೆ.ಸೋಮವಾರ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅದ್ದೂರಿಯಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದರು.
ದಾವಣಗೆರೆ: ಸರಗಳ್ಳತನ ಮಾಡುತ್ತಿದ್ದ 5 ಆರೋಪಿಗಳ ಬಂಧನ; 22.12 ಲಕ್ಷ ಮೌಲ್ಯದ ಬಂಗಾರದ ಆಭರಣ,ಕಾರು, ಬೈಕ್ ವಶ
ಒಂದಾದ ನಾಯಕರು
ದಾವಣಗೆರೆ ಬಿಜೆಪಿಯಲ್ಲಿ ಬಣ ರಾಜಕೀಯ ಕೊನೆಗೊಂಡಿದ್ದು, ಜಿ.ಎಂ. ಸಿದ್ದೇಶ್ವರ್ ಮತ್ತು ಎಂ.ಪಿ. ರೇಣುಕಾಚಾರ್ಯ ನಡುವಿನ ಭಿನ್ನಾಭಿಪ್ರಾಯ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ದಾವಣಗೆರೆ ನಗರದ ಅರ್ಬನ್ ಬ್ಯಾಂಕ್ ಕಲ್ಯಾಣ ಮಂಟಪದಲ್ಲಿ ನಡೆದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಈ ಇಬ್ಬರೂ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ವೇದಿಕೆಯ ಮೇಲೆ ಪರಸ್ಪರ ಕೈ ಎತ್ತುವ ಮೂಲಕ ‘ಬಿಜೆಪಿ ಒಂದಾಗಿದೆ ಎಂಬ ಸಂದೇಶ ರವಾನಿಸಿದರು. ಜಿಲ್ಲಾ ಬಿಜೆಪಿಯಲ್ಲಿದ್ದ ಬಣ ತಿಲಾಂಜಲಿ ಹಾಡಿರುವ ನಾಯಕರು, ಒಗ್ಗಟ್ಟಿನಿಂದ ಚುನಾವಣೆ ಗೆಲ್ಲುವ ಶಪಥ ಮಾಡಿದ್ದಾರೆ.
ಈ ಒಗ್ಗಟ್ಟು ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಆನೆ ಬಲ ತಂದಿದೆ. ಹಿರಿಯ ನಾಯಕರ ಬೆಂಬಲ ಮತ್ತು ಕಾರ್ಯಕರ್ತರ ಉತ್ಸಾಹ ಬಿಜೆಪಿ ಗೆಲುವಿಗೆ ದಾರಿ ಆಗುತ್ತಾ ಎಂಬುದಕ್ಕೆ ಮೇ 4 ರಂದು ಉತ್ತರ ಸಿಗಲಿದೆ.



