ಬೆಂಗಳೂರು: ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 6 ವರ್ಷ ತುಂಬಬೇಕು ಎಂಬ ಕಡ್ಡಾಯ ನಿಯಮವನ್ನು 2026-27 ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ ವಿನಾಯಿತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಸಭೆಗೆ ಮಾಹಿತಿ ನೀಡಿದ ಅವರು, ಒಂದನೇ ತರಗತಿಗೆ ದಾಖಲಾತಿ ಮಾಡುವಾಗ 60 ದಿನಗಳ ಸಡಲಿಕೆ (ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ) ನೀಡಲಾಗುವುದು. ಇದಕ್ಕೆ ಪೂರಕವಾಗಿ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುವುದು ಎಂದರು.
ದಾವಣಗೆರೆ ಉಪಚುನಾವಣೆ: ಕಡೆ ದಿನ ನಾಮಪತ್ರ ಹಿಂಪಡೆದ 11 ಅಭ್ಯರ್ಥಿಗಳು
ಒಂದನೇ ತರಗತಿ ದಾಖಲಾತಿಗೆ ಆರು ವರ್ಷದ ಕಡ್ಡಾಯ ನಿಯಮಕ್ಕೆ ಹೊಂದಿಕೊಳ್ಳಲು ಎಲ್ಕೆಜಿ ಮತ್ತು ಯುಕೆಜಿ ಹಂತದಲ್ಲೇ ದಾಖಲಾತಿ ವಯೋಮಿತಿ ನಿಗದಿ
ಮಾಡಲು ನಿರ್ದಿಷ್ಟ ಕಾನೂನುಗಳಿಲ್ಲ. ಇದರಿಂದ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಪರಿಹಾರ ಕಲ್ಪಿಸಲು ಕಾನೂನಿನ ಅಗತ್ಯವಿದೆ. ಕರ್ನಾಟಕ ಶಿಕ್ಷಣ ಕಾಯ್ದೆಯ ತಿದ್ದುಪಡಿ ತಂದು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.



