ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.ದಾವಣಗೆರೆ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಬಿ. ವಿನಾಯಕ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ಉಪಚುನಾವಣೆ: ಕಡೆ ದಿನ ನಾಮಪತ್ರ ಹಿಂಪಡೆದ 11 ಅಭ್ಯರ್ಥಿಗಳು
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ ಕರ್ತವ್ಯಕ್ಕೆ ನಿಯೋಜನೆತಾಗಿದ್ದ ಅಧಿಕಾರಿಗಳಿಗೆ ವಾಹನಗಳ ಹಂಚಿಕೆ ಮಾಡುವ ಜವಾಬ್ದಾರಿಯನ್ನು ವಿನಾಯಕ ಅವರಿಗೆ ವಹಿಸಲಾಗಿತ್ತು. 70 ವಾಹನಗಳನ್ನು ಚುನಾವಣಾ ಕರ್ತವ್ಯಕ್ಕೆ ಹಂಚಿಕೆ ಮಾಡಿರುವುದಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಅವರು ಮಾಹಿತಿ ನೀಡಿದ್ದರು. ಆದರೆ ಸೆಕ್ಟರ್ ಅಧಿಕಾರಿಗಳಿಗೆ ವಾಹನ ಏಕೆ ಹಂಚಿಕೆ ಮಾಡಿಲ್ಲ ಎಂಬುದಕ್ಕೆ ಉತ್ತರಿಸಲು ವಿಫಲರಾದ ಕಾರಣ ನೋಟಿಸ್ ನೀಡಲಾಗಿತ್ತು. ನೋಟಿಸ್ ಗೆ ವಿನಾಯಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ತವ್ಯ ಲೋಕದ ಕಾರಣಕ್ಕೆ ಸೇವೆಯಿಂದ ಅಮಾನತು ಮಾಡಲಾಗಿದೆ.



