ಬೆಂಗಳೂರು: ಮಾರ್ಚ್ 30ಕ್ಕೆ ನಿಗದಿಯಾಗಿದ್ದ ಎಸ್ಎಸ್ಎಲ್ಸಿಯ ತೃತೀಯ ಭಾಷೆಯ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ.
ದಾವಣಗೆರೆ ಉಪಚುನಾವಣೆ; ಕರ್ತವ್ಯ ಲೋಪ ಎಸಗಿದ ಅಧಿಕಾರಿ ಅಮಾನತು
ರಾಜ್ಯ ಸರ್ಕಾರವು ಮಹಾವೀರ ಜಯಂತಿ ರಜೆಯನ್ನು ಮಾ. 31ರ ಬದಲು 30ಕ್ಕೆ ನಿಗದಿ ಮಾಡಿದೆ. ಈ ಹಿನ್ನೆಲೆತಯಲ್ಲಿ ಪರೀಕ್ಷೆಯನ್ನು ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
1ನೇ ತರಗತಿ ದಾಖಲಾತಿ; 6 ವರ್ಷ ಕಡ್ಡಾಯ ನಿಯಮದಲ್ಲಿ ವಿನಾಯಿತಿ; ಶಿಕ್ಷಣ ಸಚಿವ
ಮಾ.30 ನಿಗದಿಯಾಗಿದ್ದ ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ,
ಕೊಂಕಣಿ, ತುಳು, ಎನ್ಎಸ್ಕ್ಯೂಎಫ್ ವಿಷಯಗಳ ಪರೀಕ್ಷೆ 31ಕ್ಕೆ ನಡೆಯಲಿದೆ. ಉಳಿದ ವಿಷಯಗಳ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



