ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಹೊನ್ನಾಳಿ ತಾಲ್ಲೂಕಿನ ನರಸಗೊಂಡನಹಳ್ಳಿಯ ಅರಕೆರೆ ಬಳಿ ಸಂಭವಿಸಿದೆ.
ದಾವಣಗೆರೆ: ಏ. 7ರಿಂದ 9ರವರೆಗೆ ಈ ಪ್ರದೇಶದಲ್ಲಿ ನಿಷೇಧಾಜ್ಞೆ
ಶಿವಕುಮಾರ್ ಸಾವನ್ನಪ್ಪಿದ ಚಾಲಕ. ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದ ಶಿವಕುಮಾರ್ , ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಹೋಗಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ.
ಶಿವಕುಮಾರ್ ಪತ್ನಿ ಶೋಭಾವತಿಗೆ ಗಂಭೀರ ಗಾಯವಾಗಿದ್ದು, ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗದ ಚಾಲನೆಯೇ ಈ ಅಪಘಾಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಾಗಿದೆ.



