ಬೆಂಗಳೂರು; ಮಳೆ ನಿಂತರೂ ಮಳೆ ಅವಾಂತರ ನಿಂತಿಲ್ಲ ಎನ್ನುವಂತೆ ದಾವಣಗೆರೆ ದಕ್ಷಿಣ ಉಪಚುನಾವಣೆ ಮುಗಿದರೂ ಕಾಂಗ್ರೆಸ್ ನಾಯಕರ ವಾಕ್ಸಮರ ನಿಂತಿಲ್ಲ. ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ಎಎಲ್ ಸಿ ಅಬ್ದುಲ್ ಜಬ್ಬಾರ್ , ನಾಸಿರ್ ಅವರನ್ನು ಅಮಾನತು ಮಾಡಿದ್ದನ್ನು ಮಾಜಿ ಸಚಿವ ಕೆ.ಎನ್. ರಾಜಣ್ಣ ಬಹಿರಂಗವಾಗಿ ಟೀಕಿಸಿದ್ದಾರೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ಒಂದು ಕುಟುಂಬಕ್ಕಾಗಿ ಮುಸ್ಲಿಮರಿಗೆ ಅನ್ಯಾಯ; ಮುಸ್ಲಿಂ ಧಾರ್ಮಿಕ ಮುಖಂಡರು ಅಸಮಾಧಾನ
ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಬಿಜೆಪಿ ರಾಘವೇಂದ್ರ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ದಿ. ಶಾಮನೂರು ಶಿವಶಂರಪ್ಪ ಲೋಕಸಭೆ ಚುನಾವಣೆಯಲ್ಲಿ ಬಹಿರಂಗ ವೇದಿಕೆಯಲ್ಲಿ ಹೇಳಿದ್ದರು. ಇನ್ನೂ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದು ಪಕ್ಷದ ಶಿಸ್ತು ಉಲ್ಲಂಘನೆ ಅಲ್ಲವೇ. ಈಗಿನ ಕೆಪಿಸಿಸಿ ಅಧ್ಯಕ್ಷರೇ ಆಗಲೂ ಇದ್ದರು. ಆಗ ಶಾಮನೂರು ಶಿವಶಂಕರಪ್ಪ ಕನಿಷ್ಠಪಕ್ಷ ಮೌಖಿಕ ಕ್ಷಮೆಯನ್ನು ಕೇಳಲಿಲ್ಲ. ಇದೆಲ್ಲ ಯಾವ ಸೂಚನೆ ನೀಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



