Connect with us

Dvgsuddi Kannada | online news portal | Kannada news online

ಹಿರಿಯ, ಕಿರಿಯರೆನ್ನದೆ ಡಿ.ಕೆ. ಶಿವಕುಮಾರ್ ಬೆಂಬಲಿಸಿ: ಮಲ್ಲಿಕಾರ್ಜುನ ಖರ್ಗೆ

ಪ್ರಮುಖ ಸುದ್ದಿ

ಹಿರಿಯ, ಕಿರಿಯರೆನ್ನದೆ ಡಿ.ಕೆ. ಶಿವಕುಮಾರ್ ಬೆಂಬಲಿಸಿ: ಮಲ್ಲಿಕಾರ್ಜುನ ಖರ್ಗೆ

ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ  ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರನ್ನು ಹಿರಿಯ,ಕಿರಿಯರೆನ್ನದೆ  ಎಲ್ಲರು ಬೆಂಬಲಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ  ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ  ಭೇಟಿ ನೀಡಿದ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಶೀರ್ವಾದ ಪಡೆದರು.

dks 2

ನಂತರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರ ಜೊತೆ  ಎಲ್ಲರೂ ಯಂಗ್‍ಸ್ಟರ್ಸ್ ಇದ್ದಾರೆ. ಡಿಕೆ ಶಿವಕುಮಾರ್ ಪಕ್ಷದ ಬಲವರ್ಧನೆ ಮಾಡುವ  ನಂಬಿಕೆ ಇದೆ. ಆದರೆ,  ಒಬ್ಬ ವ್ಯಕ್ತಿಯಿಂದ ಪಕ್ಷ ಬಲಪಡಿಸಲು ಆಗಲ್ಲ. ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಡಿಕೆಶಿಗೆ ಬೆಂಬಲಿಸಬೇಕು. ಎಲ್ಲರೂ ಡಿಕೆಶಿಗೆ ಬೆಂಬಲಿಸಿದರೆ ಮಾತ್ರ ಕೆಲಸ ಮಾಡಲು ಸಾಧ್ಯ. ವ್ಯಕ್ತಿ ಎಷ್ಟೇ ಸಮರ್ಥ ಇದ್ದರೂ ಬೇರೆಯವರ ಬೆಂಬಲ ಅಗತ್ಯ ಎಂದರು.

ಬಳಿಕ ಮಾತಾಡಿದ ಡಿ.ಕೆ ಶಿವಕುಮಾರ್,  ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ನನಗೆ ಎಲ್ಲರೂ ಜೊತೆ ಇದ್ದರೆ ಮಾತ್ರ ಪಕ್ಷ ಕಟ್ಟಲು ಸಾಧ್ಯ. ಹಿರಿಯರು, ಕಿರಿಯರು, ಯುವಕರು, ಮಹಿಳೆಯರು ಎಲ್ಲರ ಪಾಲ್ಗೊಳ್ಳುವಿಕೆ ಬೇಕು. ದೆಹಲಿಗೆ ನಾನೊಬ್ಬನೇ ಹೋಗುವುದಿಲ್ಲ. ನಮ್ಮೆಲ್ಲ ನಾಯಕರನ್ನು ಕರೆದುಕೊಂಡು ಹೋಗ್ತೇನೆ. ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವ ಸಂಬಂಧ ಎಲ್ಲರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top