ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮೊದಲ ಸುತ್ತಿನಲ್ಲಿ 718 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಆರಂಭಿಕ ಹಂತದಲ್ಲಿ ಹಿನ್ನಡೆ ಸಾಧಿಸಿದ್ದಾರೆ.
ಅಂಚೆ ಮತ ಎಣಿಕೆಯಲ್ಲಿಯೂ ಸಮರ್ಥ್ 8 ಮತಗಳಿಂದ ಮುನ್ನಡೆ ಸಾಧಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.



