ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಮತ ಎಣಿಕೆ ಭರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಎರಡು ಮತ್ತು ಮೂರನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಎರಡು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.
3 ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ 4,683 ಮತಗಳ ಅಂತರದಿಂದ ಮುನ್ನಡೆ ಪಡೆದಿದ್ದಾರೆ. ಮೊದಲ ಸುತ್ತಿನಲ್ಲಿ 718 ಮತಗಳಿಂದ ಕಾಂಗ್ರೆಸ್ ನ ಸಮರ್ಥ್ ಮುನ್ನಡೆ ಸಾಧಿಸಿದ್ದಾರೆ. ನಂತರ ಬಿಜೆಪಿ ಅಭ್ಯರ್ಥಿ ಶ್ರೀವಾಸ ದಾಸಕರಿಯಪ್ಪ. ಎರಡು ಮತ್ತು ಮೂರನೇ ಸುತ್ತಿನಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಅಂಚೆ ಮತ ಎಣಿಕೆಯಲ್ಲಿ ಸಮರ್ಥ್ 8 ಮತಗಳಿಂದ ಮುನ್ನಡೆ ಸಾಧಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.



