ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 14 ನೇ ಸುತ್ತಿನಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,423 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನಿಂದ ಸತತ 14ನೇ ಸುತ್ತಿನ ವರೆಗೆ ಸರ್ಮರ್ಥ್ ಮುನ್ನಡೆ ಅಂತರ ಹೆಚ್ಚಿಸಿಕೊಳ್ಳುತ್ತ ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀವಾಸ ದಾಸಕರಿಯಪ್ಪ ಸತತ ಹಿನ್ನಡೆಯಾಗಿದೆ.
ಒಟ್ಟು 21 ಸುತ್ತಿನ ಮತ ಎಣಿಕೆಯಲ್ಲಿ ಪ್ರಸ್ತುತ 14 ನೇ ಸುತ್ತು ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,423 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 46,460 ಮತ, ಬಿಜೆಪಿ ಅಭ್ಯರ್ಥಿ ಶ್ರೀವಾಸ ದಾಸಕರಿಯಪ್ಪ 39,037 ಮತ ಪಡೆದಿದ್ದಾರೆ.
ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರು. ನಂತರದ 2ರಿಂದ 7ನೇ ಸುತ್ತಿನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿತ್ತು. ನಂತರ 8ರಿಖದ ಮತ್ತು 14ನೇ ಸುತ್ತಿನಲ್ಲಿ ಕಾಂಗೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ.
ಅಂಚೆ ಮತ ಎಣಿಕೆಯಲ್ಲಿ ಸಮರ್ಥ್ 8 ಮತಗಳಿಂದ ಮುನ್ನಡೆ ಸಾಧಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.



