ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 20 ನೇ ಸುತ್ತಿನಲ್ಲಿ ಕಾಂಗ್ರೆಸ್ ಗೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4,967 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನಿಂದ ಸತತ 20ನೇ ಸುತ್ತಿನ ವರೆಗೆ ಸರ್ಮರ್ಥ್ ಮುನ್ನಡೆ ಅಂತರ ಹೆಚ್ಚಿಸಿಕೊಳ್ಳುತ್ತ ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀವಾಸ ದಾಸಕರಿಯಪ್ಪ ಸತತ ಹಿನ್ನಡೆಯಾಗಿದೆ. ಒಂದು ಸುತ್ತು ಎಣಿಜೆ ಮಾತ್ರ ಬಾಕಿ ಇದ್ದು, ಮತಗಳ ಅಂತರ ಕಂಡು ಕಾಂಗ್ರೆಸ್ ನ ಕಾರ್ಯಕರ್ತರು ಗೆಲುವಿನ ಸಂಭ್ರಮ ಮಾಡುತ್ತುದ್ದಾರೆ.
ಒಟ್ಟು 21 ಸುತ್ತಿನ ಮತ ಎಣಿಕೆಯಲ್ಲಿ ಪ್ರಸ್ತುತ 20 ನೇ ಸುತ್ತು ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4,967 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 67,576 ಮತ, ಬಿಜೆಪಿ ಅಭ್ಯರ್ಥಿ ಶ್ರೀವಾಸ ದಾಸಕರಿಯಪ್ಪ 62,609 ಮತ ಪಡೆದಿದ್ದಾರೆ.
ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರು. ನಂತರದ 2ರಿಂದ 7ನೇ ಸುತ್ತಿನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿತ್ತು. ನಂತರ 8ರಿಂದ ಮತ್ತು 20ನೇ ಸುತ್ತಿನಲ್ಲಿ ಕಾಂಗೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಇನ್ನೊಂದು ಸುತ್ತು ಮಾತ್ರ ಬಾಕಿನದೆ.
ಅಂಚೆ ಮತ ಎಣಿಕೆಯಲ್ಲಿ ಸಮರ್ಥ್ 8 ಮತಗಳಿಂದ ಮುನ್ನಡೆ ಸಾಧಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ನಿಧನದಿಂದ ಉಪ ಚುನಾವಣೆ ನಡೆಯುತ್ತಿದೆ.



