ದಾವಣಗೆರೆ: ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯದ ಗಂಭೀರ ಆರೋಪ ಎದುರಿಸುತ್ತಿದ್ದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಹರಿಹರ ಪಂಚಮಸಾಲಿ ಪೀಠದಲ್ಲಿ ಸ್ವಾಮೀಜಿ, ಟ್ರಸ್ಟಿಗಳ ನಡುವಿನ ಭಿನ್ನಾಭಿಪ್ರಾಯ; ಸಭೆ, ಸಮಾರಂಭ, ಸುದ್ದಿಗೋಷ್ಠಿಗೆ ನಿಷೇಧ
ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯದ ಗಂಭೀರ ಆರೋಪದ ದೂರಿನ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶ್ರೀಗಳು, ಏಪ್ರಿಲ್ 21ರಂದು ಜಿಲ್ಲಾ ನ್ಯಾಯಾಲಯದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 482ರ ಅಡಿಯಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಸರ್ಕಾರಿ ಅಭಿಯೋಜಕರ ಆಕ್ಷೇಪಣೆ ಹಾಗೂ ಪ್ರತಿವಾದಗಳನ್ನು ಆಲಿಸಿದ ನಂತರ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ದಾವಣಗೆರೆ: ಸೋಲಿನಿಂದ ಕಾರ್ಯಕರ್ತರು ಹತಾಷರಾಗುವ ಅಗತ್ಯವಿಲ್ಲ; ಜಿಲ್ಲೆಯಲ್ಲಿ ಬಿಜೆಪಿಯ ಗತವೈಭವ ಮರುಕಳಿಸಲಿದೆ
ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಅಪ್ರಾಪ್ತ ಮಕ್ಕಳು ಹಾಗೂ ಸಂವೇದನಾಶೀಲ ಪ್ರಕರಣಗಳಿಗೆ ಸಂಬಂಧಿಸಿದ ನ್ಯಾಯಾಲಯದ ಆದೇಶದ ಪ್ರತಿಗಳನ್ನು ಸಾರ್ವಜನಿಕವಾಗಿ ಆನ್ಲೈನ್ನಲ್ಲಿ ಲಭ್ಯವಾಗದಂತೆ ಗೌಪ್ಯವಾಗಿಡಲಾಗಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು, ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು ಮತ್ತು ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬ ಕಠಿಣ ಷರತ್ತುಗಳನ್ನು ಶ್ರೀಗಳಿಗೆ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಏನಿದು ಪ್ರಕರಣ..?
ಏಪ್ರಿಲ್ 17ರಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಮಂಜುಳ ಮಹೇಶ್ ಹಾಗೂ ತಂಡವು ಹರಿಹರ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭದಲ್ಲಿ ಮಠದಲ್ಲಿದ್ದ ಮಕ್ಕಳು, ಸ್ವಾಮೀಜಿಯವರು ದೈಹಿಕವಾಗಿ ಹಿಂಸಿಸುತ್ತಾರೆ ಹಾಗೂ ಅನಾರೋಗ್ಯದ ಸಮಯದಲ್ಲಿ ಸೂಕ್ತ ಔಷಧೋಪಚಾರ ನೀಡುವುದಿಲ್ಲ ಎಂದು ಸಮಿತಿಯ ಮುಂದೆ ಅಳಲು ತೋಡಿಕೊಂಡಿದ್ದರು. ಮಠದ ವಾಸದ ಕೊಠಡಿ, ಗುರು ನಿವಾಸ ಹಾಗೂ ಭೋಜನಾಲಯಗಳನ್ನು ಪರಿಶೀಲಿಸಿದ್ದ ಸಮಿತಿಯು ಈ ಕುರಿತು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿತ್ತು.
ಮಠದ ಆವರಣದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಜಾಮೀನು ದೊರೆತಿರುವುದು ಶ್ರೀಗಳ ಬೆಂಬಲಿಗರಿಗೆ ತಾತ್ಕಾಲಿಕ ಸಮಾಧಾನ ತಂದಿದೆ. ಆದರೆ, ಮಠದ ಲೆಕ್ಕಪತ್ರದ ವಿವಾದ ಹಾಗೂ ಆಡಳಿತಾತ್ಮಕ ಸಂಘರ್ಷ ಮುಂದುವರೆದಿದೆ.



