ದಾವಣಗೆರೆ: ನಗರವನ್ನು ಸ್ವಚ್ಛ, ತ್ಯಾಜ್ಯಮುಕ್ತ ಹಾಗೂ ಸ್ವಸ್ಥ ನಗರವನ್ನಾಗಿ ನಿರ್ಮಿಸುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಮನೆ ಅಥವಾ ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಕಡ್ಡಾಯವಾಗಿ ಮೂಲದಲ್ಲಿಯೇ ವಿಂಗಡಿಸಿ ಪಾಲಿಕೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ಡಾ. ಮಹಾಂತೇಶ್.ಎನ್ ತಿಳಿಸಿದ್ದಾರೆ.
ದಾವಣಗೆರೆ ಅಂಚೆ ವಿಭಾಗ; ಜೀವ ವಿಮೆ ಪ್ರತಿನಿಧಿ, ಫೀಲ್ಡ್ ಆಫೀಸರ್ ಹುದ್ದೆಗೆ ನೇರ ಸಂದರ್ಶನ
ತ್ಯಾಜ್ಯವನ್ನು ಪ್ರಮುಖವಾಗಿ ಈ ಕೆಳಗಿನ ನಾಲ್ಕು ಬಗೆಯಲ್ಲಿ ವಿಂಗಡಿಸುವುದು ಕಡ್ಡಾಯವಾಗಿರುತ್ತದೆ.ಕೊಳೆಯುವ ಹಸಿತ್ಯಾಜ್ಯ, ಕೊಳೆಯದ ಒಣತ್ಯಾಜ್ಯ (ಮರುಬಳಕೆಗೆ ಯೋಗ್ಯ ಹಾಗೂ ಯೋಗ್ಯವಲ್ಲದ ದಹನಕಾರಿ ತ್ಯಾಜ್ಯ), ಸ್ಯಾನಿಟರಿ ತ್ಯಾಜ್ಯ (ಬಳಸಿದ ತಕ್ಷಣವೇ ಕಂಪನಿ ಒದಗಿಸಿದ ಪೌಚ್ ಅಥವಾ ಪಾಲಿಕೆ ಸೂಚಿಸಿದ ರೀತಿಯಲ್ಲಿ ಸುತ್ತಿ ನೀಡಬೇಕು), ವಿಶೇಷ ಆರೈಕೆ ತ್ಯಾಜ್ಯ.
ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನಿಯಮಗಳು:
ಹೋಟೆಲ್, ಕಲ್ಯಾಣ ಮಂಟಪ, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ವಸತಿ ಸಮುಚ್ಚಯಗಳು ದಿನವೊಂದಕ್ಕೆ 100 ಕೆಜಿಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸಿದಲ್ಲಿ, ಅಥವಾ 20,000 ಚದರ ಮೀಟರ್ಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿದ್ದಲ್ಲಿ, ಅಥವಾ ದಿನಕ್ಕೆ 40,000 ಲೀಟರ್ ನೀರು ಬಳಕೆ ಮಾಡುತ್ತಿದ್ದಲ್ಲಿ ಅವರನ್ನು ‘ಬೃಹತ್ ತ್ಯಾಜ್ಯ ಉತ್ಪಾದಕರು’ ಎಂದು ಪರಿಗಣಿಸಲಾಗುವುದು.
ದಾವಣಗೆರೆ: ವಿವಿಧ ಏರಿಯಾದಲ್ಲಿ ಬೆ.9ರಿಂದ ಸಂ.5ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
ತಮ್ಮ ಆವರಣದಲ್ಲಿಯೇ ಹಸಿ ಕಸವನ್ನು ಸಂಸ್ಕರಿಸಬೇಕು (ಕಾಂಪೋಸ್ಟ್/ಬಯೋಗ್ಯಾಸ್). ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರೀಕೃತ ಪೋರ್ಟಲ್ನಲ್ಲಿ BWG ಎಂದು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಮತ್ತು ದಂಡ
ರಸ್ತೆ, ಚರಂಡಿ, ಖಾಲಿ ನಿವೇಶನಗಳಲ್ಲಿ ಕಸ ಎಸೆಯುವುದು ಅಥವಾ ಕಸಕ್ಕೆ ಬೆಂಕಿ ಹಚ್ಚುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಘನತ್ಯಾಜ್ಯ ನಿರ್ವಹಣೆ ಉಪವಿಧಿಗಳನ್ವಯ ದಂಡ ವಿಧಿಸಲಾಗುವುದು. ತಪ್ಪು ಮರುಕಳಿಸಿದರೆ ಪರಿಸರ ಸಂರಕ್ಷಣಾ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಸಾರ್ವಜನಿಕರು ಪಾಲಿಸಬೇಕಾದ ಪ್ರಮುಖ ನಿಯಮಗಳು:
ಬಲ್ಕೀ ತ್ಯಾಜ್ಯ: ತೋಟಗಾರಿಕೆ ಕಸ, ಹಳೇ ಹಾಸಿಗೆ, ದಿಂಬು, ಚಾಪೆಗಳನ್ನು ಪ್ರತ್ಯೇಕವಾಗಿ ಹಸ್ತಾಂತರಿಸಬೇಕು.
ಶುಲ್ಕ ಪಾವತಿ: ಪಾಲಿಕೆ ನಿಗದಿಪಡಿಸಿದ ಮಾಸಿಕ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.
ಸಭೆ-ಸಮಾರಂಭಗಳು: 100 ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ಪಾಲಿಕೆಗೆ ಮಾಹಿತಿ ನೀಡಿ, ಅಗತ್ಯ ಶುಲ್ಕ ಪಾವತಿಸಿ ತ್ಯಾಜ್ಯ ಸಂಗ್ರಹಣಾ ವಾಹನಗಳ ಸೇವೆ ಪಡೆಯಬೇಕು.
ಪ್ಲಾಸ್ಟಿಕ್ ನಿಷೇಧ: ಕಸದ ಪ್ರಮಾಣ ತಗ್ಗಿಸಲು ಏಕಬಳಕೆ (Single-use) ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.ನಗರದ ಸ್ವಚ್ಛತೆಯ ಹಿತದೃಷ್ಟಿಯಿಂದ ಸಾರ್ವಜನಿಕರು, ಉದ್ದಿಮೆದಾರರು ಹಾಗೂ ಬೀದಿ ಬದಿ ವ್ಯಾಪಾರಿಗಳು ಪಾಲಿಕೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.



