ದಾವಣಗೆರೆ: ಬರ್ತ್ ಡೇ ಪಾರ್ಟಿಯಲ್ಲಿ ಗೆಳೆಯರ ಮೇಲೆ ಹಲ್ಲೆ ನಡೆಸಿದ್ದನ್ನು ಕೇಳಲು ಹೋಗಿದ್ದ ಯುವಕನಿಗೆ ಚಾಕು ಇರಿದ ಘಟಕ ದಾವಣಗೆರೆಯಲ್ಲಿ ನಡೆದಿದೆ.
ನಗರದ ವಿಜಯನಗರ ಬಡಾವಣೆಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ಅಭ್ಯಾಸ ಮಾಡುತ್ತಿರುವ ಮನೋಜ್ (19) ಚಾಕು ಇರಿತಕ್ಕೆ ಒಳಗಾದ ವಿದ್ಯಾರ್ಥಿಯಾಗಿದ್ದಾನೆ.
ಕ್ಷುಲ್ಲಕ ವಿಚಾರಕ್ಕೆ ಮೇಲೆ ಹಲ್ಲೆ ನಡೆದಿದೆ. ಗೆಳೆಯರಿಗೆ ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದೀರಿ ಎಂದು ಕೇಳುತ್ತಿದ್ದಾಗ ಏಕಾಏಕಿ ಮನೋಜ್ ಗೆ ಚಾಕುವಿನಿಂದ ಹೊಟ್ಟೆ, ಕೈಗೆ ತಿವಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿರುವ ಮನೋಜ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.ತೀವ್ರ ಗಾಯಗೊಂಡಿರುವ ಮನೋಜ್ ಸ್ಥಿತಿ ಗಂಭಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಗೆ ಕರೆದೊಯ್ಯಲು ಸೂಚಿಸಲಾಗಿದೆ. ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



