ದಾವಣಗೆರೆ: ಜಿಲ್ಲೆಯ ರೈತರಿಗೆ ತೋಟಗಾರಿಕೆ ಇಲಾಖೆಯಲ್ಲಿ 2026-27ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದಾಳಿಂಬೆ ಬೆಳೆಯಲ್ಲಿ ಪೆಸ್ಟ್ ನಿರೋಧಕ ಬಲೆ, ಪ್ರಾಥಮಿಕ ಸಂಸ್ಕರಣಾ ಘಟಕ, ಕೃಷಿಹೊಂಡ ಮತ್ತು ಪ್ಯಾಕ್ ಹೌಸ್ ನಿರ್ಮಾಣಕ್ಕೆ ಸಹಾಯಧನ ದೊರೆಯಲಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು 2 ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತದೆ. ಅಲ್ಲದೆ, ಟ್ರ್ಯಾಕ್ಟರ್ ಟ್ರೈಲರ್, ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೂ ಬ್ರಷ್ ಕಟ್ಟರ್ ಮುಂತಾದ ಯಂತ್ರೋಪಕರಣಗಳಿಗೂ ಸಹಾಯಧನ ಲಭ್ಯವಿದೆ.
ದಾವಣಗೆರೆ: ಈ ಪ್ರದೇಶದಲ್ಲಿ ಬೆ.9ರಿಂದ ಸಂ.5ಗಂಟೆ ವರೆಗೆವಿದ್ಯುತ್ ವ್ಯತ್ಯಯ
ಕೇಂದ್ರ ಪುರಸ್ಕೃತ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ (SMAM) ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸೋಲಾರ್ ಪಂಪ್ ಸೆಟ್, ಲಘು ಪೋಪಕಾಂಶಗಳ ಮಿಶ್ರಣ, ಹವಾಮಾನ ಆಧಾರಿತ ಘಟಕ, ಪ್ಲಾಸ್ಟಿಕ್ ಕ್ರೇಟ್ಸ್, ಫಾರ್ಮ್ ಗೇಟ್, ಕಡಿಮೆ ವೆಚ್ಚದ ಹಣ್ಣು ಮಾಗಿಸುವ ಘಟಕ, ಈರುಳ್ಳಿ ಶೇಖರಣಾ ಘಟಕ ಮತ್ತು ತೆಂಗು ಶೇಖರಣಾ ಘಟಕಗಳ ಸ್ಥಾಪನೆಗೆ ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜೂನ್ 20, 2026 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್) ಕಚೇರಿ, ಪಿ.ಬಿ. ರಸ್ತೆ, ದಾವಣಗೆರೆ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್), ದಾವಣಗೆರೆ ತಿಳಿಸಿದ್ದಾರೆ.



