ಬೆಂಗಳೂರು: ರಾಜ್ಯದ ( karnataka) ಕರಾವಳಿಗೆ ಭಾಗಕ್ಕೆ ಮುಂಗಾರು ಮಳೆ (monsoon rain) ಎಂಟ್ರಿ ಕೊಟ್ಟಿದ್ದು, ಮುಂದಿನ 48 ಗಂಟೆಯಲ್ಲಿ ಇಡೀ ರಾಜ್ಯವನ್ನು ವ್ಯಾಪಿ ವಿಸ್ತರಣೆಯಾಗುವ ಮುನ್ಸೂಚನೆ ಇದೆ. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶವನ್ನು ಮುಂಗಾರು ಆವರಿಸಿದೆ. ರಾಜ್ಯದಲ್ಲಿ ಮಾನ್ಸೂನ್ ಪೂರಕವಾದ ವಾತಾವರಣ ನಿರ್ಮಾಣವಾಗಿದೆ.ಮುಂದಿನ 7 ದಿನಗಳಲ್ಲಿ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ.
ದಾವಣಗೆರೆ: ಸರ್ಕಾರದಿಂದ 200 ಮನೆ ಹಂಚಿಕೆಗೆ ಅರ್ಜಿ ಆಹ್ವಾನ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 7ರಿಂದ ಜೂ 10ವರೆಗೆ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಬಿರುಗಾಲಿ ಸಹಿತ ಜೋರು ಮಳೆಯ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಮುಂದಿನ 4 ದಿನ ಮತ್ತು ಕೊಪ್ಪಳದಲ್ಲಿ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಇರಲಿದೆ. ಚಾಮರಾಜನಗರ, ದಾವಣಗೆರೆ ಮತ್ತು ಮಂಡ್ಯದಲ್ಲಿ ಜೂ 7ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ತುಮಕೂರು, ಕೋಲಾರ, ದಾವಣಗೆರೆ ಸೇರಿ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


