ದಾವಣಗೆರೆ: ತುಂಬಿದ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 15ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡಿವೆ. ಈ ದುರ್ಘಟನೆಯಲ್ಲಿ ಒಬ್ಬರು ವ್ಯಕ್ತಿಗೆ ಗಾಯವಾಗಿದೆ.
ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಎಚ್.ಕಲ್ಪನಹಳ್ಳಿ ಸಮೀಪದ ಅಡುಗೆ ಅನಿಲದ ಸಿಲಿಂಡರ್ ಗೋದಾಮಿನಲ್ಲಿ ಈ ಅಗ್ನಿ ಅಪಘಾತ ಸಂಭವಿಸಿದೆ. ಈ 15ಕ್ಕೂ ಹೆಚ್ಚು ಸಿಲಿಂಡರ್ ಮುಗಿಲೆತ್ತರಕ್ಕೆ ಸ್ಪೋಟಗೊಂಡಿವೆ. ಘಟನೆಯಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಫೋಟದ ರಭಸಕ್ಕೆ ಸಿಲಿಂಡರ್ಗಳು 200 ಮೀಟರ್ ದೂರದವರೆಗೆ ಬಿದ್ದಿವೆ.
ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಅನಿಲ್ (30) ಎಂಬುವರು ಗಾಯಗೊಂಡಿದ್ದು, ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ರಭಸಕ್ಕೆ ಗೋದಾಮು ಚಾವಣಿ ಸಂಪೂರ್ಣ ಕಿತ್ತು ಹೋಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ದೊಗ್ಗಳ್ಳಿ ಶಿವಕುಮಾರ್ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಗೋದಾಮು ಇದ್ದು, ಈ ಜಾಗದಲ್ಲಿ ಅನಿಲ್ ಎಂಬುವವರು ಗ್ಯಾಸ್ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


