ದಾವಣಗೆರೆ: ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಸ್ಫೋಟ; 200 ಮೀಟರ್ ವರೆಗೂ ಸಿಡಿದ ಸಿಲಿಂಡರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತುಂಬಿದ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 15ಕ್ಕೂ ಹೆಚ್ಚು ಸಿಲಿಂಡರ್‌ ಸ್ಪೋಟಗೊಂಡಿವೆ. ಈ ದುರ್ಘಟನೆಯಲ್ಲಿ ಒಬ್ಬರು ವ್ಯಕ್ತಿಗೆ ಗಾಯವಾಗಿದೆ.

ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಎಚ್.ಕಲ್ಪನಹಳ್ಳಿ ಸಮೀಪ‌ದ ಅಡುಗೆ ಅನಿಲದ ಸಿಲಿಂಡರ್ ಗೋದಾಮಿನಲ್ಲಿ ಈ ಅಗ್ನಿ ಅಪಘಾತ ಸಂಭವಿಸಿದೆ. ಈ 15ಕ್ಕೂ ಹೆಚ್ಚು ಸಿಲಿಂಡರ್‌ ಮುಗಿಲೆತ್ತರಕ್ಕೆ ಸ್ಪೋಟಗೊಂಡಿವೆ. ಘಟನೆಯಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು 200 ಮೀಟರ್ ದೂರದವರೆಗೆ ಬಿದ್ದಿವೆ.

ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ‌. ಘಟನೆಯಲ್ಲಿ ಅನಿಲ್ (30) ಎಂಬುವರು ಗಾಯಗೊಂಡಿದ್ದು, ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ರಭಸಕ್ಕೆ ಗೋದಾಮು ಚಾವಣಿ ಸಂಪೂರ್ಣ ಕಿತ್ತು ಹೋಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ದೊಗ್ಗಳ್ಳಿ ಶಿವಕುಮಾರ್ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಗೋದಾಮು ಇದ್ದು, ಈ ಜಾಗದಲ್ಲಿ ಅನಿಲ್ ಎಂಬುವವರು ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *