ದಾವಣಗೆರೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸೇರಲು ವಿವಿಧ ಜಿಲ್ಲಾ ನಾಯಕರು ಪೈಪೋಟಿಗೆ ಇಳಿದಿದ್ದಾರೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮತ್ತೆ ಮಂತ್ರಿ ಅಗುವ ಆಸೆ ಇಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಇರುವೆ ಎಂದಿದ್ದಾರೆ.
ದಾವಣಗೆರೆ: ಅಡಿಕೆ ದರ ಮತ್ತಷ್ಟು ಕುಸಿತ; ಎಷ್ಟಿದೆ ಇಂದಿನ ರಾಶಿ ಅಡಿಕೆ ದರ..?
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸಚಿವ ಸಂಪುಟ ಸೇರಬೇಕೆಂಬ ಆಸೆ ನನಗಿಲ್ಲ. ಈ ಬಗ್ಗೆ ಮಂತ್ರಿ ಸ್ಥಾನಕ್ಕೆ ಪಕ್ಷದ ಎದುರು ಬೇಡಿಕೆ ಇಟ್ಟಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕಿದೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಆಡಳಿತ ನಡೆಸುತ್ತಿದೆ. ಎಲ್ಲ ಬಡವರಿಗೆ ಅನುಕೂಲ ಆಗಬೇಕು. 2028ರಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ನಾವೆಲ್ಲ ಶ್ರಮಿಸುತ್ತೇವೆ.
ನನ್ನ ವಿರೋಧದ ನಡುವೆಯೂ ಪ್ರತಿಭಟನೆ
ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಬೇಡಿಕೆ ಮುಂದಿಟ್ಟಿದ್ದು, ನನ್ನ ವಿರೋಧದ ನಡುವೆ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ನಮ್ಮ ಸಹಮತವಿಲ್ಲ. ಕಾಂಗ್ರೆಸ್ ಕುಟುಂಬಕ್ಕೆ ಸೇರಿದ ನಾನು ಪಕ್ಷದ ಸೂಚಿಸಿದ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಆಗಲಿ ಎಂದರು.


