ಹರಿಹರ: ತಾಲ್ಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಎಚ್. ಜಯಪ್ಪ (54) ಶಾಲೆಯಲ್ಲಿ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಶಾಲೆಯ ಅಡುಗೆ ಸಿಬ್ಬಂದಿ ಮತ್ತು ಸಹ ಶಿಕ್ಷಕರೇ ನನ್ನ ಸಾವಿಗೆ ಕಾರಣ ಎಂದು ಜಯಪ್ಪ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಜಯಪ್ಪ ಕುಟುಂಬದ ಸದಸ್ಯರು ಠಾಣೆಗೆ ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಶಾಲೆಯ ಕೆಲ ಸಹಶಿಕ್ಷಕರನ್ನು ವರ್ಗಾಯಿಸಲಾಗಿದೆ. ಪರ್ಯಾಯ ವ್ಯವಸ್ಥೆ ಮಾಡಲಾಗುದೆ. ಡಿವೈಎಸ್ಪಿ ಬಸವರಾಜ್ ಮತ್ತು ಪೊಲೀಸ್ ಸಿಬ್ಬಂದಿ ಕೊಕ್ಕನೂರಿಗೆ ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದಿದ್ದಾರೆ.


