ದಾವಣಗೆರೆ: ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ (bhadra dam) ಮಲೆನಾಡು ವ್ಯಾಪ್ತಿಯಲ್ಲಿ ಮುಂಗಾರು ಒಂದು ತಿಂಗಳ ನಂತರ ಅಬ್ಬರಿಸುತ್ತಿದೆ. ಕಳೆದ ಒಂದು ತಿಂಗಳಿಂದ ಮಳೆ ಇಲ್ಲದೆ ಖಾಲಿ ಖಾಲಿಯಾಗಿದ್ದ ಡ್ಯಾಂಗೆ ಈಗ ಅಚ್ಚುಕಟ್ಟು ಪ್ರದೇಶದಲ್ಲಿನ ಜೋರು ಮಳೆಯಿಂದ ಒಳ ಹರಿವು ಹೆಚ್ಚಾಗಿದೆ.
ಭದ್ರಾ ಜಲಾಶಯದಿಂದ ನಾಲೆಗೆ ನೀರು ಹರಿಸಲು ಸಾಧ್ಯವಿಲ್ಲ; ರೈತರ ಸಹಕಾರ ಕೋರಿದ ಕರ್ನಾಟಕ ನೀರಾವರಿ ನಿಗಮ
ಈಗಾಗಲೇ ಮುಂಗಾರು ಬೆಳೆಗೆ ನಾಲೆಯಿಂದ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಪ್ರಕಟಿಸಿತ್ತು. ಇದರಿಂದ ಆತಂಕ್ಕೆ ಒಳಗಾಗಿದ್ದ ರೈತರಲ್ಲಿ ಮಳೆ ಅಬ್ಬರ, ಒಳ ಹರಿವು ಹೆಚ್ಚಳದಿಂದ ರೈತರಲ್ಲಿ ಹೊಸ ಭರವಸೆ ಮೂಡಿದೆ. ಒಂದು ವೇಳೆ ಇದೇ ರೀತಿ ಮಳೆ ಮುಂದುವರೆದು ಡ್ಯಾಂ ತುಂಬಿದ್ರೆ ಅಷ್ಟೇ ಭದ್ರಾ ಸಲಹಾ ಸಮಿತಿ ಸಭೆ ಕರೆದು, ಈ ಬಾರಿ ಮುಂಗಾರು ಬೆಳೆಗೆ ನಾಲೆಯಿಂದ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ನಿಗಮ ತಿಳಿಸಿದೆ.
ಇಂದು(ಜು.2) ಬೆಳಗ್ಗೆ ಹೊತ್ತಿಗೆ ಒಳ ಹರಿವು 3,369 ಕ್ಯೂಸೆಕ್ ನಷ್ಟಿದೆ. ಕಳೆದ ಎರಡ್ಮೂರು ದಿನದ ಹಿಂದೆ 300 ಕ್ಯೂಸೆಕ್ ನಷ್ಟಿದ್ದ ಒಳಹರಿವು ಒಮ್ಮೆಲೇ 3 ಸಾವಿರ ಗಡಿದಾಟಿದೆ. ಇದರಿಂದ ನೀರಿನ ಮಟ್ಟ 137.5 ಅಡಿಗೆ ತಲುಪಿದೆ.
ಈ ಬಾರಿಯ ಮುಂಗಾರು ಜೂನ್ ತಿಂಗಳ ಆರಂಭವಾದರೂ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗದಿದ್ದರಿಂದ ಭದ್ರಾ ಜಲಾಶಯಕ್ಕೆ ನೀರಿನ ಒಳನ ಹರಿವು ಕುಂಠಿತವಾಗಿತ್ತು. ಇದೀಗ ಜುಲೈ ಆರಂಭದಿಂದ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಿದೆ. ಅಚ್ಚುಕಟ್ಟು ಭಾಗದ ರೈತರು ನಿರಂತರ ಮಳೆಯಾಗಿ ಜಲಾಶಯ ಭರ್ತಿಯಾಗಿ ನಾಲೆಗೆ ನೀರು ಹರಿಯುವಂತಾಗಲಿ ಎಂದು ಪ್ರಾರ್ಥಿಸಿಸುತ್ತಿದ್ದಾರೆ.
ಭದ್ರಾ ಜಲಾಶಯ ಇಂದಿನ ( ಜು.2) ಒಳ ಹರಿವು 3,369 ಕ್ಯೂಸೆಕ್ ಇದೆ. ನೀರಿನ ಮಟ್ಟ 137.5 ಅಡಿಯಷ್ಟಿದೆ. ಕಳೆದ ವರ್ಷ ಇದೇ ದಿನ 164 ಅಡಿ ನೀರು ಇತ್ತು. ಈ ವರ್ಷ ಮಳೆ ನೀರಿಕ್ಷಿತ ಮಟ್ಟದಷ್ಟು ಸುರಿದಿಲ್ಲ.
ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ
- ದಿನಾಂಕ :2-7-2026
- ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ
- ಪ್ರಸ್ತುತ ನೀರಿನ ಮಟ್ಟ ; 25.161 ಟಿಎಂಸಿ
- ಗರಿಷ್ಠ ಮಟ್ಟ: 186ಅಡಿ
- ಇಂದಿನ ಮಟ್ಟ:137.5 ಅಡಿ
- ಒಳ ಹರಿವು: 3,369 ಕ್ಯೂಸೆಕ್
- ಹೊರ ಹರಿವು : 209 ಕ್ಯೂಸೆಕ್
- ಕ್ರೆಸ್ಟ್ ಗೇಟ್ : 00 ಕ್ಯೂಸೆಕ್
- ಎಡ ದಂಡೆ : 50 ಕ್ಯೂ ಸೆಕ್
- ಬಲ ದಂಡೆ : 00 ಕ್ಯೂಸೆಕ್
- ಕಳೆದ ವರ್ಷ ಈ ದಿನದ ನೀರಿನ ಮಟ್ಟ: 164 ಅಡಿ
- ಕಳೆದ ವರ್ಷದ ಇದೇ ದಿನ ಒಳಹರಿವು: 11,875 ಕ್ಯೂಸೆಕ್


