ದಾವಣಗೆರೆ: ದಾವಣಗೆರೆ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ನೂತನ ಕಟ್ಟಡವನ್ನು ಕುಂದುವಾಡ ಬಳಿ ನಿರ್ಮಾಣ ಮಾಡುತ್ತಿದ್ದು ಕಾಮಗಾರಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರೂ ಪರಿಶೀಲನೆ ನಡೆಸಿದರು.
ಜಿಲ್ಲಾ ನ್ಯಾಯಾಲಯದ ಎಲ್ಲಾ ಹಂತದ ಕೋರ್ಟ್ ಗಳಿಗೆ ಅಗತ್ಯವಿರುವ ಕಟ್ಟಡದ ಸಂಕೀರ್ಣ ಇದಾಗಿದ್ದು ಸುಮಾರು ರೂ.25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಕಟ್ಟಡ ನೆಲ ಮಹಡಿ ಮತ್ತು 2 ಅಂತಸ್ತನ್ನು ಹೊಂದಿದ್ದು ಪೂರ್ಣ ಹಂತಕ್ಕೆ ತಲುಪಿದೆ, ಪ್ಲೋರಿಂಗ್ ಕಾಮಗಾರಿ ನಡೆಯುತ್ತಿದೆ.
ಮುಖ್ಯ ನ್ಯಾಯಮೂರ್ತಿ ಅವರು ಕಟ್ಟಡದ ಪ್ಲಾನ್ ಮತ್ತು ಕೋರ್ಟ್ ಕಾರ್ಯ, ಕಲಾಪಗಳಿಗೆ ಅಗತ್ಯವಿರುವ ಸ್ಥಳಾವಕಾಶದ ಬಗ್ಗೆ ಪರಿಶೀಲನೆ ನಡೆಸಿದರು. ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ 15 ಕೋರ್ಟ್ ಹಾಲ್ಗಳನ್ನು ನಿರ್ಮಾಣ ಮಾಡಲಾಗಿದೆ.
ಈ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ರವಿ ವಿ.ಹೊಸಮನಿ, ಹೈಕೋರ್ಟ್ ರಿಜಿಸ್ಟಾçರ್ ಜನರಲ್ ಚಂದ್ರಶೇಖರ ರೆಡ್ಡಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಡಿ.ಕೆ ಹಾಗೂ ವಿವಿಧ ನ್ಯಾಯಾಧೀಶರು, ಅಧಿಕಾರಿಗಳು ಉಪಸ್ಥಿತರಿದ್ದರು.


