ದಾವಣಗೆರೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆೆ (ಎಸ್ ಐಆರ್) ನೇಮಕಗೊಂಡಿದ್ದ ಬಿಎಲ್ ಒ, ಸಮೀಕ್ಷೆ ಮುಗಿಸಿ ಮನೆಗೆ ಹೋದಾಗ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.
ಚಿರಡೋಣಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಡಿ.ಆರ್.ರಾಜಪ್ಪ ಮೃತರು. ಕೇಂದ್ರ ಸರ್ಕಾರದ ಮಹತ್ವದ ‘ಎಸ್.ಐ.ಆರ್’ ಸಮೀಕ್ಷಾ ಕಾರ್ಯಕ್ಕಾಗಿ ಬಿಎಲ್ ಒ ಆಗಿ ನಿಯೋಜಿಸಲಾಗಿತ್ತು. ಶುಕ್ರವಾರ ದಿನಪೂರ್ತಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದ ರಾಜಪ್ಪ, ಸಂಜೆ ಕೆಲಸ ಮುಗಿಸಿ ಮನೆಗೆ ಮರಳಿದ್ದರು.
ತಡರಾತ್ರಿ ದಿಢೀರನೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಚಿಕಿತ್ಸೆ ಕೊಡಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


