ದಾವಣಗೆರೆ: ನಕಲಿ ಬಂಗಾರ ನೀಡಿ ವಂಚನೆ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ; 62.25 ಲಕ್ಷ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಕಲಿ ಬಂಗಾರ ನೀಡಿ ವಂಚಿಸಿದ್ದ ಮೂವರು ಆರೋಪಿಗಳನ್ನು ನ್ಯಾಮತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 62.25 ಲಕ್ಷ ರೂ. ನಗದು ಹಣ ವಶಪಡಿಸಿಕೊಂಡಿದ್ದಾರೆ.

ಚನ್ನಗಿರಿ ತಾಲೂಕಿನ ಸಚಿನ್ ಗೋಂಧಳಿ @ಸ್ಯಾಂಡಿ @ ರಮೇಶ(21), ನ್ಯಾಮತಿ ತಾಲೂಕಿನ ಸಂದೀಪ(38), ರವಿ(40) ಬಂಧಿತ ಆರೋಪಿಗಳು. ವಂಚನೆ ಮಾಡಿದ್ದ ಒಟ್ಟು 62,25,000 ರೂ. ನಗದು ಹಣವನ್ನು ವಶಕ್ಕೆಪಡೆಯಲಾಗಿದೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹಳೆ ಮನೆ ಕೆಡವಿ ಪಾಯ ತೆಗೆಯುತ್ತಿರುವಾಗ ಬಂಗಾರದ ನಿಧಿ ಸಿಕ್ಕಿದ್ದು, ಕಡಿಮೆ ಬೆಲೆಗೆ ಕೊಡುವುದಾಗಿ ವಿಜಯಕುಮಾರ ಎಂಬುವರ ಮುಖಾಂತರ ಮಹಾರಾಷ್ಟ್ರ ಸೊಲ್ಲಾಪುರ ಜಿಲ್ಲೆಯ ಶಿವಾನಂದಪ್ಪಗೆ ಆರೋಪಿ ರಮೇಶ ನಂಬಿಸಿದ್ದ. ಸ್ಯಾಂಪಲ್ ತೆಗೆದುಕೊಂಡು ಹೋಗಿ ಪರೀಕ್ಷಿಸಿದಾಗ ಅದು ಅಸಲಿ ಬಂಗಾರವಾಗಿತ್ತು. ಕಳೆದ ಜೂ.28ರಂದು ಸವಳಂಗ-ಶಿಕಾರಿಪುರ ರಸ್ತೆಯ ಮಾಚಿಗೊಂಡನಹಳ್ಳಿ ಕೆರೆ ಸಮೀಪದ ತೋಟದಲ್ಲಿ ಶಿವಾನಂದಪ್ಪರನ್ನು ಭೇಟಿಯಾದ ಆರೋಪಿಗಳು 85 ಲಕ್ಷ ರೂ. ಪಡೆದು, ಕವರ್ ನಲ್ಲಿದ್ದ ಅಂದಾಜು 1 ಕೆ.ಜಿ ಯಷ್ಟು ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ಓಡಿ ಹೋಗಿದ್ದರು. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಸ್ಪಿ ಹೆಚ್.ಟಿ.ಶೇಖರ್, ಎಎಸ್ಪಿ ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ಚನ್ನಗಿರಿ ಡಿವೈಎಸ್ಪಿ ಬಿ.ಎಸ್.ಬಸವರಾಜ್ ಉಸ್ತುವಾರಿಯಲ್ಲಿ ನ್ಯಾಮತಿ ಠಾಣೆಯ ಪೊಲೀಸ್ ನಿರೀಕ್ಷಕ ಹೆಚ್.ಎಂ.ಸಿದ್ದೇಗೌಡ ನೇತೃತ್ವದ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *