ದಾವಣಗೆರೆ: ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ 6 ವಿದ್ಯಾರ್ಥಿಗಳಿಗೆ ಹೊಡೆದಿದೆ. ಇದರ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ಅಥಣಿ ಕಾಲೇಜು ಬಳಿ ನಡೆದಿದೆ.
ತರಗತಿ ಮುಗಿಸಿಕೊಂಡು ಕಾಲೇಜಿನಿಂದ ಹೊರಬಂದಿದ್ದ ವಿದ್ಯಾರ್ಥಿಗಳು ಬಸ್ಗೆ ಕಾಯುತ್ತಿದ್ದರು. ಆಗ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಗೆ ನಿಂತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದೆ.
ಮೂವರು ವಿದ್ಯಾರ್ಥಿಗಳ ಕೈ-ಕಾಲು ಮುರಿದಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಕ್ಷಿಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ


