ದಾವಣಗೆರೆ: ಜಪ್ತಿ ಮಾಡಿದ 3.91 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರಿಸಿದ ಜಿಲ್ಲಾ ಪೊಲೀಸ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಜಪ್ತಿಪಡಿಸಿಕೊಂಡಿದ್ದ ಒಟ್ಟು 3.91 ಕೋಟಿ ಮೌಲ್ಯದ ಸ್ವತ್ತನ್ನು ವಾರಸುದಾರರಿಗೆ ಪೊಲೀಸ್ ಇಲಾಖೆಯಿಂದ ಹಿಂತಿರುಗಿಸಲಾಯಿತು.

ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ 20-12-2025 ರಿಂದ 20-07-2026 ರವರೆಗೆ ವರದಿಯಾಗಿ ಪತ್ತೆಯಾಗಿರುವ ಸ್ವತ್ತು ಕಳವು ಪ್ರಕರಣಗಳಲ್ಲಿ, ಕಳುವಾಗಿದ್ದ ಮಾಲನ್ನು ಪತ್ತೆ ಮಾಡಿ, ಅಮಾನತ್ತುಪಡಿಸಿಕೊಂಡಿದ್ದು, ಈ ಸಂಬAಧವಾಗಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಡಿಎಆರ್ ಕಚೇರಿ, ಪಿಜೆ ಬಡಾವಣೆಯಲ್ಲಿ ಸದರಿ ಪತ್ತೆಯಾದ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾಲುಗಳನ್ನು, ಅವುಗಳ ವಾರಸುದಾರರಿಗೆ ಎಸ್ಪಿ ಶೇಖರ್ ಹೆಚ್ ಟಿ, ನೇತೃತ್ವದಲ್ಲಿ “ಪ್ರಾಪರ್ಟಿ ರಿಟರ್ನ್ ಪೆರೇಡ್”ನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪ್ರಾಪರ್ಟಿ ಪರೇಡ್‌ನಲ್ಲಿ ಜಪ್ತುಪಡಿಸಿಕೊಂಡಿರುವ ಒಟ್ಟು-87 ಪ್ರಕರಣಗಳಿಗೆ ಸಂಬಂಧಿಸಿದAತೆ 22,94,000/- ರೂ ಮೌಲ್ಯದ ವಿವಿಧ ಮಾದರಿಯ 31 ವಾಹನಗಳು, 90,67,500/- ನಗದು ಹಣ, 2,16,65,376/- ರೂ ಮೌಲ್ಯದ 1668.314 ಗ್ರಾಂ ಬಂಗಾರದ ಆಭರಣಗಳು ಹಾಗೂ 18569.854 ಬೆಳ್ಳಿ ಆಭರಣಗಳು, ಮೊಬೈಲ್ ಕಳವು / ಕಳೆದುಕೊಂಡು ದಾಖಲಾಗಿದ್ದ ಪ್ರಕರಣಗಳಲ್ಲಿ ಸಿಇಐಆರ್ ಪೋರ್ಟಲ್ ಸಹಾಯದ ಮೂಲಕ ಒಟ್ಟು 56,55,000/-ರೂ ಮೌಲ್ಯದ ವಿವಿಧ ಮಾದರಿಯ 377 ಮೊಬೈಲ್ ಪೋನ್‌ಗಳು ಹಾಗೂ ಒಟ್ಟು 4,87,260/- ರೂ ಮೌಲ್ಯದ ಕೃಷಿ ಉಪಕರಣಗಳು, ಅಡಿಕೆ, ಬೋರವೆಲ್ ವೈರ್, ಮೋಟರ್ ಮತ್ತು ಇತರೆ ವಸ್ತುಗಳು. ಒಟ್ಟು 3,91,69,136 ಮೌಲ್ಯದ ಸ್ವತ್ತು ಕಳವು ಪ್ರಕರಣಗಳಲ್ಲಿನ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿರುತ್ತದೆ.

ಅರ್ಧ ಹೆಲ್ಮೆಟ್, ಡಿಫೆಕ್ಟಿವ್ ಸೈಲೆನ್ಸರ್ ನಾಶ

ಇದೇ ಸಂದರ್ಭದಲ್ಲಿ ದಾವಣಗೆರೆ ನಗರದಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದ ಕಾನೂನು ಬಾಹಿರವಾಗಿ / ಸಂಚಾರ ನಿಯಮಗಳನ್ನು ಉಲ್ಲಂಘಿ ಧರಿಸುತ್ತಿದ್ದ ಉತ್ತಮ ಗುಣಮಟ್ಟವಲ್ಲದ ಸುಮಾರು 2000 ಕ್ಕೂ ಹೆಚ್ಚು ಅರ್ಧ ಹೆಲ್ಮೆಟ್ ಗಳನ್ನು ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ ಕರ್ಕಶ ದ್ವನಿ ಸೂಸುವ 85 ಕ್ಕೂ ಹೆಚ್ಚು ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಹಾಗೂ ಇತರೆ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ 25 ಶ್ರಿಲ್ ಹರ‍್ನ್÷್ಸ ಗಳನ್ನು & 10 ಸ್ಪೀಕರ್ ಡಕ್ ಗಳನ್ನು ಬುಲ್ಡೋಜರ್ ಮೂಲಕ ನಾಶಪಡಿಸಲಾಯಿತು.

ಸದರಿ ಪಾಪರ್ಟಿ ಪೆರೇಡ್‌ನಲ್ಲಿ ಡಿವೈಎಸ್ಪಿ ಶರಣಬಸವೇಶ್ವರ ಬಿ, ದಾವಣಗೆರೆ ಗ್ರಾಮಾಂತರ ಬಸವರಾಜ್ ಬಿ ಎಸ್., ಸೈಬರ್ ಪೊಲೀಸ್ ಠಾಣೆಯ ಡಿವೈಎಸ್ಪಿ ನಾಗಪ್ಪ ಬಂಕಾಳಿ, ಡಿಎಆರ್ ಡಿವೈಎಸ್ಪಿ ತಿಪ್ಪೆಸ್ವಾಮಿ ರವರು ಹಾಗೂ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್ ಜಿ ಬಿ., ಶಿಲ್ಪಾ, ನಂಜುಂಡಸ್ವಾಮಿ, ರಾಘವೇಂದ್ರ, ವಸಂತ್, ಶ್ರೀ ಸಿದ್ದೇಗೌಡ ಹಾಗೂ ಪಿಎಸ್ ಐ ಮತ್ತು ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *