ದಾವಣಗೆರೆ: ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್ಪಿಸಿಎಲ್ ಹಾಗೂ ಐಓಸಿಎಲ್ ಅನಿಲ ಗ್ರಾಹಕರ ತಮ್ಮ ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಯನ್ನು ಆಗಸ್ಟ್ 15 ರೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
ಗ್ರಾಹಕರ ಪರಿಶೀಲನೆಯನ್ನು ಬಲಪಡಿಸಲು, ಅರ್ಹ ಫಲಾನುಭವಿಗಳ ನಿಖರ ದಾಖಲೆಗಳನ್ನು ನಿರ್ವಹಿಸಲು ಮತ್ತು ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ಕೈಗೊಳ್ಳಲಾಗಿದೆ. ನಿಗಧಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಅನಿಲ ಗ್ರಾಹಕರ ಎಲ್ಪಿಜಿ ಸಂಪರ್ಕವನ್ನು ತಾತ್ಕಾಲಿಕವಾಗಿ ಅಮಾನತ್ತುಗೊಳಿಸಲಾಗುವುದು. ಗ್ರಾಹಕರು ತಮ್ಮ ವ್ಯಾಪ್ತಿಯ ಗ್ಯಾಸ್ ವಿತರಕರ ಕಚೇರಿಗಳು, ವಿಶೇಷ ಶಿಬಿರಗಳು ಅಥವಾ ಗ್ಯಾಸ್ ಡೋರ್ ಡಿಲೇವರಿ ಸಂದರ್ಭದಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಸಾರ್ವಜನಿಕರು ಗ್ಯಾಸ್ ಪೂರೈಕೆಯಲ್ಲಿ ಆಗುವ ವ್ಯತ್ಯಯವನ್ನು ತಪ್ಪಿಸಲು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.


