ದಾವಣಗೆರೆ: ಮಹಿಳೆಯನ್ನು ಬೆದರಿಸಿ ಚಿನ್ನದ ಸರ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಆರೋಪಿಗಳನ್ನು ಜಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಗಳೂರಿನ ನಿವಾಸಿ ನೀಲಮ್ಮ, ಲಿಖಿತ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಆರೋಪಿಗಳು ಮಹಿಳೆ ಮನೆಗೆ ನುಗ್ಗಿ ಮಹಿಳೆಯರನ್ನು ಇಟ್ಟುಕೊಂಡು ವ್ಯವಹಾರ ಮಾಡುತ್ತೀಯಾ.. ಈ ಬಗ್ಗೆ ನಮ್ಮಲ್ಲಿ ಸಾಕ್ಷ್ಯಧಾರಗಳು ಇರುತ್ತವೆ. ನಿಮ್ಮ ಮೇಲೆ ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಕೊಟ್ಟು ಮೀಡಿಯಾಕ್ಕೆ ಹಾಕಿಸಿ ಮಾನ ಮಾರ್ಯದೆ ತೆಗೆಯುತ್ತೇವೆ. ಮೊಬೈಲ್ ನಲ್ಲಿ ಮಹಿಳೆ ಸೆರೆಹಿಡಿದುಮೀಡಿಯಾದಲ್ಲಿ ಹಾಕಿಸಿ ಮಾನ ಹಾರಾಜು ಹಾಕುತ್ತೇವೆ ಎಂದು ಬೆದರಿಸಿದ್ದಾರೆ. ನಂತರ 3 ಲಕ್ಷ ಹಣ ನೀಡಲು ಬೇಡಿಕೆ ಇಟ್ಟಿದ್ದು, ಹಣ ನೀಡುವವರೆಗೆ ಕೊರಳಲ್ಲಿದ್ದ ಬಂಗಾರದ ಸರವನ್ನು, ಮೊಬೈಲ್ ಅನ್ನು ಕಿತ್ತುಕೊಂಡು ಹೋಗಿರುವ ಬಗ್ಗೆ ದೂರು ನೀಡಿದ್ದರು.
ಪಿ ಐ ಸಿದ್ರಾಮಯ್ಯ ಮಾರ್ಗದರ್ಶನದಲ್ಲಿ ಪಿಎಸ್ ಐ ಧರೇಪ್ಪಾ ಬಿ ದೊಡಮನಿ ರವರು ಹಾಗೂ ಸಿಬ್ಬಂದಿಗಳ ತಂಡ ತನಿಖೆಯನ್ನು ಕೈಗೊಳ್ಳಲಾಗಿತ್ತು. ಈ ತಂಡ ಆರೋಪಿಗಳಾದ ಎ1) ತಿಮ್ಮೇಶ, ಎ2) ಗರುರಾಜ್ @ ಗುರು, ಎ3) ಸಂತೋಷ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 35 ಗ್ರಾಂ ಬಂಗಾರದ ಆಭರಣ ಹಾಗೂ ಒಂದು ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಬಂಧಿತ ಆರೋಪಿತರುಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಉಳಿದ ಆರೋಪಿತರ ಪತ್ತೆ ಕಾರ್ಯ ಮುಂದುವರೆದಿರುತ್ತದೆ. ಸದರಿ ಪ್ರಕರಣದಲ್ಲಿ ಆರೋಪಿತರನ್ನು ಬಂಧಿಸಿ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಅಧಿಕಾರಿಗಳನ್ನು ಎಸ್ಪಿ ಶೇಖರ್ ಹೆಚ್ ಟಿ ಹಾಗೂ ಎಎಸ್ಪಿ ಪರಮೇಶ್ವರ ಹೆಗಡೆ ಪ್ರಶಂಸಿದ್ದಾರೆ.


